ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಒಪ್ಪಿಗೆ

ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿ ಮತ್ತು ಅದರ ಉಪ ನದಿಗಳಿಗೆ 2 ಟಿಎಂಸಿ ನೀರನ್ನು ...

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿ ಮತ್ತು ಅದರ ಉಪ ನದಿಗಳಿಗೆ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಒಪ್ಪಿಕೊಂಡಿದ್ದಾರೆ.
ಇದರಿಂದ ಉತ್ತರ ಕರ್ನಾಟಕ ಬರಗಾಲ ಪೀಡಿತ ಪ್ರದೇಶಗಳಿಗೆ ನೀರಿಗೆ ಸ್ವಲ್ಪ ಸಹಾಯವಾಗಲಿದೆ. ಉತ್ತರ ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ನೇತೃತ್ವದಲ್ಲಿ ಬಿಜೆಪಿ ನಾಯಕರು ಮತ್ತು ಶಾಸಕರ ನಿಯೋಗ ಮುಂಬೈಯಲ್ಲಿ ನಿನ್ನೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂದು ಉತ್ತರ ಕರ್ನಾಟಕದ ಬರಗಾರ ಪರಿಸ್ಥಿತಿ ಬಗ್ಗೆ ವಿವರಿಸಿದ್ದರು.
ನಿಯೋಗದಲ್ಲಿ ರಾಜ್ಯದ ವಿರೋಧಪಕ್ಷದ ಮುಖ್ಯ ಸಚೇತಕ ಮಹಂತೇಶ್ ಕವಟಗಿಮಠ, ಶಾಸಕರಾದ ಶಶಿಕಲಾ ಜೊಲ್ಲೆ, ಪಿ ರಾಜೀವ್, ದುರ್ಯೋಧನ ಐಹೊಳೆ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಾಜಿ ಶಾಸಕ ರಾಜು ಕಾಗೆ, ಸಿದ್ದು ಸವದಿ ಮತ್ತು ಅಣ್ಣಾಸಾಹೇಬ್ ಜೊಳ್ಳೆ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಕವಟಗಿಮಠ, ರಾಜ್ಯದಲ್ಲಿ ನೀರಿನ ಬರಗಾಲದಿಂದ ರೈತರಿಗೆ ಆಗುವ ಸಂಕಷ್ಟದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನದಟ್ಟು ಮಾಡಿದೆವು. ನೀರನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಅದೇ ರೀತಿ ಕರ್ನಾಟಕದ ಅಣೆಕಟ್ಟುಗಳಿಂದ ಮಹಾರಾಷ್ಟ್ರದ ಜಾಟ್ ಸಮುದಾಯದವರ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡುವಂತೆ ಕೂಡ ಹೇಳಿದ್ದಾರೆ. ನೀರಿನ ಹಂಚಿಕೆಗೆ ಸಂಬಂಧಪಟ್ಟಂತೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಹೇಳಿದ್ದು ಅಲ್ಲದೆ ಎರಡೂ ರಾಜ್ಯಗಳ ನಡುವಿನ ನೀರಿನ ಹಂಚಿಕೆಗೆ ಸಂಬಂಧಪಟ್ಟಂತೆ ಸಹಿ ಮಾಡಿರುವುದನ್ನು ಜಾರಿಗೆ ತರುವ ಬಗ್ಗೆ ಕೂಡ ಅವರು ಒಲವು ತೋರಿಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT