ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಮದುವೆಯಾದ 11ನೇ ದಿನವೇ ನವವಧು ನೇಣಿಗೆ ಶರಣು

ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಭಾನುವಾರ ದಾವಣಗೆರೆ ಕೆಟಿಜೆ ನಗರದಲ್ಲಿ ನವವಿವಾಹಿತೆಯಾದ ಶಿಲ್ಪಾ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆ ಚಿತ್ರದುರ್ಗದ ಕೋಣುರು ಗ್ರಾಮದವರಾಗಿದ್ದು ಇದೇ ಗ್ರಾಮದ ಮಂಜು ಎಂಬುವವರೊಡನೆ ಹನ್ನೊಂದು ದಿನಗಳ ಹಿಂದೆ ಮದುವೆಯಾಗಿದ್ದರು. 
ಆತ್ಮಹತ್ಯೆಗೆ ಶರನಾದ ವಧುವಿನ ಕೈಮೇಲೆ ನಾಲ್ವರ ಹೆಸರು ಬರೆದುಕೊಂಡಿರುವುದು ಪತ್ತೆಯಾಗಿದೆ. ಇದರ ಹಿಂದೆಯೇ ಹಲವು ಅನುಮಾನಗಳು ಮೂಡಿವೆ.
ಆಕೆ ತನ್ನ ಕೈಮೇಲೆ ಪತಿ ಮಂಜು, ಅವರ ಸಂಬಂಧಿಗಳಾದ ಕಲ್ಲೇಶ್, ಬಸಪ್ಪ ಹಾಗೂ ಸಂತೋಷ್  ಎಂಬುವವರ ಹೆಸರು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ಶಿಲ್ಪಾ ಹಾಗೂ ಮಂಜು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು ಅಂತರ್ಜಾತಿ ವಿವಾಹವಾಗಿರುವ ಕಾರಣ ತಮ್ಮ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಶಿಲ್ಪಾ ಪೋಷಕರು ಆರೋಪಿಸಿದ್ದಾರೆ.
ಕೆಟಿಜೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT