ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅತ್ತಿಬೆಲೆಯಲ್ಲಿ ಯುವಕನೋರ್ವನ ಬರ್ಬರ ಹತ್ಯೆ

ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ ಅಪರಿಚತ ಶವ ಕಳೆದ ರಾತ್ರಿ ಪತ್ತೆಯಾಗಿದೆ. ಆತ ಕೆಲಸಕ್ಕಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ  ಅಪರಿಚತ ಶವ  ಕಳೆದ ರಾತ್ರಿ ಪತ್ತೆಯಾಗಿದೆ.  ಆತ ಕೆಲಸಕ್ಕಾಗಿ ತಮಿಳುನಾಡಿನಿಂದ  ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟ ಯುವಕ ಈ ಹಿಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಗ್ಗೆ ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದುಷ್ಕರ್ಮಿಗಳು ಕಲ್ಲಿನಿಂದ ತಲೆ ಜಜ್ಜಿದ್ದಾರೆ. ನಂತರ ಮೃತದೇಹವನ್ನು ನಂಜುಂಡಪ್ಪ ಲೇಔಟ್  ನಲ್ಲಿ ಎಸೆಯಲಾಗಿದೆ.

ರಕ್ತದ ಮಡುವಿನಲ್ಲಿ ಬಿದಿದ್ದ ಮೃತದೇಹವನ್ನು ಇಂದು ಬೆಳಗ್ಗೆ ನೋಡಿದ ದೇವಾಲಯದ ಆರ್ಚಕರೊಬ್ಬರು ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ  ಕೊಲೆ ನಡೆದಿರಬಹುದೆಂಬ ಶಂಕೆ ಇದೆ ಎಂದು ಪೊಲೀಸರು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಗ್ಗೆ ತಮಿಳುನಾಡು ಪೊಲೀಸರಿಗೆ ತಿಳಿಸಲಾಗಿದೆ. ಕೊಲೆ ನಡೆದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳು ಕಂಡುಬಂದಿಲ್ಲ, ವಿಚಾರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!