ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅತ್ತಿಬೆಲೆಯಲ್ಲಿ ಯುವಕನೋರ್ವನ ಬರ್ಬರ ಹತ್ಯೆ

ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ ಅಪರಿಚತ ಶವ ಕಳೆದ ರಾತ್ರಿ ಪತ್ತೆಯಾಗಿದೆ. ಆತ ಕೆಲಸಕ್ಕಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ  ಅಪರಿಚತ ಶವ  ಕಳೆದ ರಾತ್ರಿ ಪತ್ತೆಯಾಗಿದೆ.  ಆತ ಕೆಲಸಕ್ಕಾಗಿ ತಮಿಳುನಾಡಿನಿಂದ  ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟ ಯುವಕ ಈ ಹಿಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಗ್ಗೆ ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದುಷ್ಕರ್ಮಿಗಳು ಕಲ್ಲಿನಿಂದ ತಲೆ ಜಜ್ಜಿದ್ದಾರೆ. ನಂತರ ಮೃತದೇಹವನ್ನು ನಂಜುಂಡಪ್ಪ ಲೇಔಟ್  ನಲ್ಲಿ ಎಸೆಯಲಾಗಿದೆ.

ರಕ್ತದ ಮಡುವಿನಲ್ಲಿ ಬಿದಿದ್ದ ಮೃತದೇಹವನ್ನು ಇಂದು ಬೆಳಗ್ಗೆ ನೋಡಿದ ದೇವಾಲಯದ ಆರ್ಚಕರೊಬ್ಬರು ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ  ಕೊಲೆ ನಡೆದಿರಬಹುದೆಂಬ ಶಂಕೆ ಇದೆ ಎಂದು ಪೊಲೀಸರು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಗ್ಗೆ ತಮಿಳುನಾಡು ಪೊಲೀಸರಿಗೆ ತಿಳಿಸಲಾಗಿದೆ. ಕೊಲೆ ನಡೆದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳು ಕಂಡುಬಂದಿಲ್ಲ, ವಿಚಾರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT