ಸುಜಾತಾ ಕೆರಳ್ಳಿ 
ರಾಜ್ಯ

ಧಾರವಾಡ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ರಾಷ್ಟ್ರಮಟ್ಟದ ಹಾಕಿ ಆಟಗಾರ್ತಿ ಸಾವು

ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕು  ಮಾದನಭಾವಿಯಲ್ಲಿ ನಡೆದ ಘಟನೆಯಲ್ಲಿ ಸುಜಾತಾ ಕೆರಳ್ಳಿ (16)  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈಕೆ 17 ವರ್ಷದೊಳಗಿನ ವರ್ಗದಲ್ಲಿ ರಾಷ್ಟ್ರಮಟ್ಟದ ಹಾಕಿಪಟುವಾಗಿ ಗುರುತಿಸಿಕೊಂಡಿದ್ದರು.
ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಜಾತಾ ರಜೆಯಿದ್ದ ಕಾರಣ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ತಂದೆ ಮಲ್ಲಿಕಾರ್ಜುನ  ಅವರೊಡನೆ ಹೊರಹೋಗಿದ್ದ ಆಕೆ ರಸ್ತೆ ದಾಟುವಾಗಲೇ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಸುಜಾತಾ ಸ್ಥಳದಲ್ಲೇ ಸಾವನ್ನಪ್ಪಿದರೆ ಮಲ್ಲಿಕಾರ್ಜುನ ಅವರುಗೆ ಅಗ್ಂಭೀರ ಗಾಯವಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿಅಲಾಗುತ್ತಿದೆ.
ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಪರಾರಿಯಾಗಿದ್ದಾನೆ, ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ವರದಿ ಪ್ರಕಾರ ಆಟಗಾರ್ತಿಯ ತಂದೆ ಮಲ್ಲಿಕಾರ್ಜುನಯ್ಯ ಸಹ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT