ಮಡಿಕೇರಿ ರೆಸಾರ್ಟ್ ನಲ್ಲಿ ವೀಕೆಂಡ್ ಕಳೆಯುವುದಕ್ಕೆ ಹೆಚ್.ಡಿ. ಕುಮಾರಸ್ವಾಮಿ ಪ್ರಯಾಣ 
ರಾಜ್ಯ

ಸಿದ್ದರಾಮಯ್ಯ ತಂಗಿದ್ದ ಮಡಿಕೇರಿಯ ರೆಸಾರ್ಟ್ ಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಯಾಣ?

ಲೋಕಸಭಾ ಚುನಾವಣೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗಾಗಿ ತಂಗಿದ್ದ ಮಡಿಕೇರಿಯ ರೆಸಾರ್ಟ್ ನಲ್ಲಿಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿರುವುದು ರಾಜಕೀಯ

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗಾಗಿ ತಂಗಿದ್ದ ಮಡಿಕೇರಿಯ ರೆಸಾರ್ಟ್ ನಲ್ಲಿಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮಡಿಕೇರಿ-ಮೈಸೂರು ರಸ್ತೆಯಲ್ಲಿ ಹಸಿರಿನ ಕಾಫಿ ತೋಟದ ನಡುವೆ ಇರುವ 'ಇಬ್ಬನಿ' ರೆಸಾರ್ಟ್ ಗೆ ಕೆಲವು ದಿನಗಳ ಹಿಂದೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಮ್ಮ ಪುತ್ರ, ಶಾಸಕ ಯತೀಂದ್ರ ಜೊತೆ ತಂಗಿದ್ದು, ಎರಡು ದಿನಗಳ ಕಾಲ ರಾಜಕೀಯ ಒತ್ತಡ ಹಾಗೂ ವಿಧಾನಸಭೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದು ವಿಶ್ರಾಂತಿ ಪಡೆದು ವಾಪಸಾಗಿದ್ದರು.
ಸಿದ್ದರಾಮಯ್ಯ ಮಡಿಕೇರಿಯಲ್ಲಿ ತಂಗಿದ್ದಂತಹ ಸಂದರ್ಭದಲ್ಲಿ ಮೈಸೂರಿನ ಕೆಲ ಆಪ್ತರನ್ನು ಹೊರತುಪಡಿಸಿದರೆ ಇನ್ನುಳಿದ ಪಕ್ಷದ ಮುಖಂಡರ ಭೇಟಿಯಿಂದ, ಮಾಧ್ಯಮಗಳಿಂದ ಅವರು ದೂರವೇ ಇದ್ದರು.
ಇನ್ನು ಸಿದ್ದರಾಮಯ್ಯ ಮಡಿಕೇರಿಯಲ್ಲಿ ತಂಗಿದ್ದಂತಹ ಸಂದರ್ಭದಲ್ಲಿಯೇ ಕಾಂಗ್ರೆಸ್‍ನಿಂದ ಮುಖ್ಯಮಂತ್ರಿ ಕೂಗು ಹೊರಬಿದ್ದಿತ್ತು. ಎಂ.ಬಿ.ಪಾಟೀಲ್ ಸೇರಿದಂತೆ ಸಿದ್ದರಾಮಯ್ಯ ಬಣದ ಹಲವರು ಸಿದ್ದರಾಮಯ್ಯ ಅವರೇ ತಮ್ಮ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇಬ್ಬನಿ ರೆಸಾರ್ಟ್ ನಲ್ಲಿಯೇ ಇದ್ದು ಎಲ್ಲಾ ರಾಜಕೀಯ ಆಗುಹೋಗುಗಳನ್ನು ಸಿದ್ದರಾಮಯ್ಯ ಪರಾಮರ್ಶೆ ನಡೆಸಿದ್ದರು. ರೆಸಾರ್ಟ್ ಹೊರ ಬಂದ ನಂತರ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ ಎಂದು ಹೇಳಿಕೆ ನೀಡುವ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ತಾತ್ಕಾಲಿಕವಾಗಿ ವಿರಾಮ ಹಾಡಿದ್ದರು.
ಇದೀಗ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆದಿದ್ದ ಇಬ್ಬನಿ ರೆಸಾರ್ಟ್ ನಲ್ಲಿಯೇ ಕುಮಾರಸ್ವಾಮಿ ವಿಶ್ರಾಂತಿ ಪಡೆಯಲು ಹೊರಟಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಶುಕ್ರವಾರ ಸಂಜೆ ಮಡಿಕೇರಿಗೆ ಪ್ರಯಾಣಬೆಳೆಸಲಿರುವ ಅವರು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಇಬ್ಬನಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಮಡಿಕೇರಿಗೆ ಪ್ರಕೃತಿ ಚಿಕಿತ್ಸೆಗಾಗಿ ಕುಮಾರಸ್ವಾಮಿ ತೆರಳುತ್ತಿದ್ದಾರೆ ಎನ್ನಲಾಗುತ್ತಿದ್ದರೂ ಒಳ ಸುಳಿವು ಬೇರೆಯೇ ಇದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT