ಹತ್ಯೆಗೀಡಾದ ಗೌರಿ ಲಂಕೇಶ್ ಮತ್ತು ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್(ಸಂಗ್ರಹ ಚಿತ್ರ) 
ರಾಜ್ಯ

ಗೌರಿ ಲಂಕೇಶ್ ಹತ್ಯೆಯಲ್ಲಿ ಸಾಧ್ವಿ ಪ್ರಗ್ಯಾ ಕೈವಾಡವಿರುವ ಯಾವುದೇ ಸಾಕ್ಷಿಗಳಿಲ್ಲ: ಎಸ್ಐಟಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ನ ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ನ ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಕೈವಾಡ ಇದೆ ಎಂದು ಮಾಧ್ಯಮದಲ್ಲಿ ಬಂದ ವರದಿಯನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್ಐಟಿ) ಗುರುವಾರ ನಿರಾಕರಿಸಿದೆ.
ಗೌರಿ ಲಂಕೇಶ್ ಹತ್ಯೆಯಲ್ಲಿ ಸಾಧ್ವಿ ಪ್ರಗ್ಯಾ ಅವರ ಕೈವಾಡವಿರುವ ಸಾಧ್ಯತೆಯಿದೆ ಎಂದು ಇಂಗ್ಲಿಷ್ ದೈನಿಕವೊಂದು ಗುರುವಾರ ವರದಿ ಪ್ರಕಟಿಸಿತ್ತು. ಈ ಕುರಿತು ಅಧಿಕೃತ ಹೇಳಿಕೆ ಹೊರಡಿಸಿರುವ ವಿಶೇಷ ತನಿಖಾ ತಂಡ, ಸಾಧ್ವಿ ಪ್ರಗ್ಯಾ ಅವರ ಕೈವಾಡ ಹತ್ಯೆಯ ಹಿಂದೆ ಇರಬಹುದೆಂದು ತಮಗೆ ತನಿಖೆಯ ಯಾವುದೇ ಹಂತದಲ್ಲಿಯೂ ಕಂಡುಬಂದಿಲ್ಲ, ಅವರ ಹೆಸರು ಆರೋಪಪಟ್ಟಿಯಲ್ಲಿ ಕೂಡ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಾಧ್ವಿ ಪ್ರಗ್ಯಾರಿಗೂ, ಮಾಲೆಗಾಂವ್ ಸ್ಫೋಟ ಮತ್ತು ಅಭಿನವ ಭಾರತ್ ಪ್ರಕರಣಕ್ಕೂ ಸಂಬಂಧವಿದೆ ಎಂದು ತನಿಖೆಯ ಹಂತದಲ್ಲಿ ಕಂಡುಬಂದಿಲ್ಲ ಅಥವಾ ಆರೋಪಪಟ್ಟಿಯಲ್ಲಿ ನಮೂದಿಸಿಲ್ಲ. ಅವುಗಳಿಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ.
2017ರ ಸೆಪ್ಟೆಂಬರ್ 5ರಂದು ರಾತ್ರಿ ವೇಳೆ ಗೌರಿ ಲಂಕೇಶ್ ನಿವಾಸದ ಹೊರಗೆ ಅವರನ್ನು ಹತ್ಯೆ ಮಾಡಿದ ಕೇಸಿನ ವಿಚಾರಣೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇದುವರೆಗೆ 16 ಮಂದಿಯನ್ನು ಬಂಧಿಸಿದ್ದು ಅವರಲ್ಲಿ ಇಬ್ಬರ ಕೈವಾಡ ಬಲವಾಗಿ ಇತ್ತು ಎಂದು ಶಂಕಿಸಲಾಗಿದೆ.
ಸನಾತನ ಸಂತದ ಪುಸ್ತಕವನ್ನು ಓದಿ ಪ್ರೇರಿತಗೊಂಡ ಬಲಪಂಥೀಯ ಕಾರ್ಯಕರ್ತರು ಗೌರಿ ಹತ್ಯೆ ಮಾಡಿರಬಹುದು ಎಂದು ವಿಶೇಷ ತನಿಖಾ ತಂಡ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?