ಹತ್ಯೆಗೀಡಾದ ಗೌರಿ ಲಂಕೇಶ್ ಮತ್ತು ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್(ಸಂಗ್ರಹ ಚಿತ್ರ) 
ರಾಜ್ಯ

ಗೌರಿ ಲಂಕೇಶ್ ಹತ್ಯೆಯಲ್ಲಿ ಸಾಧ್ವಿ ಪ್ರಗ್ಯಾ ಕೈವಾಡವಿರುವ ಯಾವುದೇ ಸಾಕ್ಷಿಗಳಿಲ್ಲ: ಎಸ್ಐಟಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ನ ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ನ ಬಿಜೆಪಿ ಸಂಸದೆ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಕೈವಾಡ ಇದೆ ಎಂದು ಮಾಧ್ಯಮದಲ್ಲಿ ಬಂದ ವರದಿಯನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್ಐಟಿ) ಗುರುವಾರ ನಿರಾಕರಿಸಿದೆ.
ಗೌರಿ ಲಂಕೇಶ್ ಹತ್ಯೆಯಲ್ಲಿ ಸಾಧ್ವಿ ಪ್ರಗ್ಯಾ ಅವರ ಕೈವಾಡವಿರುವ ಸಾಧ್ಯತೆಯಿದೆ ಎಂದು ಇಂಗ್ಲಿಷ್ ದೈನಿಕವೊಂದು ಗುರುವಾರ ವರದಿ ಪ್ರಕಟಿಸಿತ್ತು. ಈ ಕುರಿತು ಅಧಿಕೃತ ಹೇಳಿಕೆ ಹೊರಡಿಸಿರುವ ವಿಶೇಷ ತನಿಖಾ ತಂಡ, ಸಾಧ್ವಿ ಪ್ರಗ್ಯಾ ಅವರ ಕೈವಾಡ ಹತ್ಯೆಯ ಹಿಂದೆ ಇರಬಹುದೆಂದು ತಮಗೆ ತನಿಖೆಯ ಯಾವುದೇ ಹಂತದಲ್ಲಿಯೂ ಕಂಡುಬಂದಿಲ್ಲ, ಅವರ ಹೆಸರು ಆರೋಪಪಟ್ಟಿಯಲ್ಲಿ ಕೂಡ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಾಧ್ವಿ ಪ್ರಗ್ಯಾರಿಗೂ, ಮಾಲೆಗಾಂವ್ ಸ್ಫೋಟ ಮತ್ತು ಅಭಿನವ ಭಾರತ್ ಪ್ರಕರಣಕ್ಕೂ ಸಂಬಂಧವಿದೆ ಎಂದು ತನಿಖೆಯ ಹಂತದಲ್ಲಿ ಕಂಡುಬಂದಿಲ್ಲ ಅಥವಾ ಆರೋಪಪಟ್ಟಿಯಲ್ಲಿ ನಮೂದಿಸಿಲ್ಲ. ಅವುಗಳಿಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ.
2017ರ ಸೆಪ್ಟೆಂಬರ್ 5ರಂದು ರಾತ್ರಿ ವೇಳೆ ಗೌರಿ ಲಂಕೇಶ್ ನಿವಾಸದ ಹೊರಗೆ ಅವರನ್ನು ಹತ್ಯೆ ಮಾಡಿದ ಕೇಸಿನ ವಿಚಾರಣೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇದುವರೆಗೆ 16 ಮಂದಿಯನ್ನು ಬಂಧಿಸಿದ್ದು ಅವರಲ್ಲಿ ಇಬ್ಬರ ಕೈವಾಡ ಬಲವಾಗಿ ಇತ್ತು ಎಂದು ಶಂಕಿಸಲಾಗಿದೆ.
ಸನಾತನ ಸಂತದ ಪುಸ್ತಕವನ್ನು ಓದಿ ಪ್ರೇರಿತಗೊಂಡ ಬಲಪಂಥೀಯ ಕಾರ್ಯಕರ್ತರು ಗೌರಿ ಹತ್ಯೆ ಮಾಡಿರಬಹುದು ಎಂದು ವಿಶೇಷ ತನಿಖಾ ತಂಡ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT