ಮಾಜಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಕುರುಬರನ್ನು ಎಸ್ ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದು, ಅಧ್ಯಯನಕ್ಕೆ ಆದೇಶ

ರಾಜ್ಯ ಸರ್ಕಾರ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡ(ಎಸ್ ಟಿ) ಪಟ್ಟಿಗೆ ಸೇರಿಸಲು ಮುಂದಾಗಿದ್ದು, ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ.....

ಬೆಂಗಳೂರು: ರಾಜ್ಯ ಸರ್ಕಾರ ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡ(ಎಸ್ ಟಿ) ಪಟ್ಟಿಗೆ ಸೇರಿಸಲು ಮುಂದಾಗಿದ್ದು, ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ಕೈಗೊಳ್ಳುವಂತೆ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸೂಚಿಸಿದೆ.
ಕುರುಬ ಜನಾಂಗವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಹಲವು ಸಂಘ-ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಇದರ ಆಧಾರದಲ್ಲಿ ಕುಲಶಾಸ್ತ್ರೀಯ ಅಧ್ಯಯನ ಕಾರ್ಯಕೈಗೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇದೀಗ ಅಧ್ಯಯನ ನಡೆಸಲು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ ನೀಡಿದೆ.
ಕುರುಬ ಸಮಾಜದ ಆಚಾರ- ವಿಚಾರ, ಭಾಷೆ, ಸಾಮಾಜಿಕ- ಶೈಕ್ಷಣಿಕ- ಆರ್ಥಿಕ ಸ್ಥಿತಿಗತಿ, ಭೌಗೋಳಿಕ ಅಂಶಗಳ ಕುರಿತಂತೆ ಕುಲಶಾಸ್ತ್ರೀಯ ಅಧ್ಯಯನವನ್ನು ಕಲಬುರಗಿ, ಬೀದರ್, ಯಾದಗಿರಿ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಅಧ್ಯಯನಕ್ಕಾಗಿ 40 ಲಕ್ಷ ರೂ. ಮಂಜೂರು ಮಾಡಲಾಗಿದೆ. ಪ್ರಸ್ತುತ ಕುರುಬ ಜನಾಂಗ ಹಿಂದುಳಿದ ವರ್ಗಗಳ (2ಎ) ಅಡಿಯಲ್ಲಿ ಬರುತ್ತಿದ್ದು, ಶೇ.15 ರಷ್ಟು ಮೀಸಲು ಲಭ್ಯವಾಗುತ್ತಿದೆ. ಎಸ್ಟಿಗೆ ಸೇರಿಸುವುದರಿಂದ ಕುರುಬ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT