ಪ್ರಿಯಾಂಕ್ ಖರ್ಗೆ 
ರಾಜ್ಯ

ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ಅಸ್ತು ಸ್ವಾಗತಾರ್ಹ: ಪ್ರಿಯಾಂಕ್ ಖರ್ಗೆ

ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದ ಪರಿಶಿಷ್ಟ ...

ಕಲಬುರಗಿ: ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದ ಪರಿಶಿಷ್ಟ ವರ್ಗದವರಿಗೆ ಆಗಿದ್ದ ಸಾಂವಿಧಾನಿಕ ಅನ್ಯಾಯವನ್ನು ಸರಿಪಡಿಸಿದಂತಾಗಿದೆ, ಉಳಿದ ವರ್ಗದವರಿಗೆ ಕಾಯಿದೆಯಿಂದ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪರವಾಗಿ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿರುವುದು ಸಂತಸ ತಂದಿದೆ. ಹೊಸ ಹುದ್ದೆ ಸೃಷ್ಟಿ, ಇತರರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗದಂತೆ  ಅಗತ್ಯ ಕ್ರಮಕೈಗೊಳ್ಳಲಾಗುವುದು. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಯಲ್ಲಿರುವ ಸಾಧಕ ಬಾಧಕಗಳ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ, ಬಳಿಕ ಇಲಾಖಾವಾರು ಜೇಷ್ಠತಾ ಪಟ್ಟಿಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ. 
ಈಗಾಗಲೇ ಹುದ್ದೆ ಅಲಂಕರಿಸಿದವರಿಗೆ ಹಿಂಬಡ್ತಿ ಮಾಡುವುದಿಲ್ಲ. ಹಿಂಬಡ್ತಿಯಾದವರಿಗೆ ಅದೇ ಹುದ್ದೆ ಕೊಡಬೇಕೆಂಬ ನಿಯಮವಿಲ್ಲ. ಈ ಹಿಂದಿನ ಗ್ರೇಡನ್ನು ಮತ್ತೆ ನೀಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಕಳೆದ ಏಪ್ರಿಲ್‍ನಲ್ಲಿ ನೂತನ ಕಾಯಿದೆಗೆ ಸಚಿವ ಸಂಪುಟ ಅಸ್ತು ಎಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT