ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಂಡು ಮಗು ಸಾವು, ನೊಂದ ತಂದೆ ಫ್ಲೈ ಓವರ್ ನಿಂದ ಜಿಗಿದು ಆತ್ಮಹತ್ಯೆ

ಅನಾರೋಗ್ಯದಿಂದ 15 ದಿನದ ಗಂಡು ಮಗು ಮೃತಪಟ್ಟಿದ್ದರಿಂದ ನೊಂದ ತಂದೆ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ...

ಬೆಂಗಳೂರು: ಅನಾರೋಗ್ಯದಿಂದ 15 ದಿನದ ಗಂಡು ಮಗು ಮೃತಪಟ್ಟಿದ್ದರಿಂದ ನೊಂದ ತಂದೆ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕಾಮಾಕ್ಷಿಪಾಳ್ಯದ ನಿವಾಸಿ ನರಸಿಂಹಮೂರ್ತಿ(28) ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಇತ್ತೀಚಿಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗು ತೀವ್ರ ಅನಾರೋಗ್ಯದಿಂದ ಮೃತಪಟ್ಟಿತ್ತು. 
ಮಗುವಿನ ಸಾವಿನಿಂದ ತೀವ್ರ ಮನನೊಂದಿದ್ದ ಆಂಧ್ರ ಪ್ರದೇಶ ಮೂಲದ ನರಸಿಂಹಮೂರ್ತಿ ಅವರು ಇಂದು ಬೆಳಗ್ಗೆ ಪೀಣ್ಯಾದ ಫ್ಲೈಓವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ನರಸಿಂಹಮೂರ್ತಿ ಅವರಿಗೆ ಒಂದು ಹೆಣ್ಣು ಮಗುವಿದ್ದು, ಹೆರಿಗೆಗೆ ಹೋದ ಪತ್ನಿ ಹಾಗೂ ಮಗಳು ತವರಿನಲ್ಲಿ ಉಳಿದುಕೊಂಡಿದ್ದರು.
ಈ ಸಂಬಂಧ ಪೀಣ್ಯಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT