ಸಾಂದರ್ಭಿಕ ಚಿತ್ರ 
ರಾಜ್ಯ

ಮೂರು ಪ್ರತ್ಯೇಕ ಅವಘಡ: ಐವರು ಯುವಕರು ನೀರು ಪಾಲು

ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಇಂದು ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ ಐವರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಚಾಮರಾಜನಗರ: ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಇಂದು ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ   ಐವರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಬಲಮುರಿ ಪಿಕ್ ನಿಕ್ ಸ್ಥಳದಲ್ಲಿ ಇಬ್ಬರು ಯುವಕರು ಮುಳುಗಿದ್ದಾರೆ. ಮತ್ತಿಬ್ಬರು ಯುವಕರು ಕೊಡಗು ಜಿಲ್ಲೆಯ ಚೆಕ್ಲಿಹೊಳೆ ಅಣೆಕಟ್ಟು ಬಳಿ ನೀರಿನಲ್ಲಿ  ಜಲ ಸಮಾಧಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಸುವರ್ಣವತಿ ಜಲಾಶಯದಲ್ಲಿ ಮತ್ತೊಬ್ಬ ಯುವಕ ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾನೆ.  

ಬಲಮುರಿಯ ಕಾವೇರಿ ನದಿಯಲ್ಲಿ ಮೃತಪಟ್ಟವರನ್ನು ಅಜಿತ (19) ಮತ್ತು ಶಿವ (19), ಇಬ್ಬರೂ ಮೈಸೂರಿನವರು ಎಂದು ಗುರುತಿಸಲಾಗಿದೆ. ಒಟ್ಟು ಆರು ಯುವಕರು ಭಾನುವಾರ ಸಂಜೆ  ಈಜಲು ಹೋಗಿದ್ದಾಗ ಈ ಘಟನೆ ಜರುಗಿದೆ. ಇಬ್ಬರ ದೇಹಗಳನ್ನೂ ಹೊರತೆಗೆದು ಕುಟುಂಬದ ಸದಸ್ಯರ ವಶಕ್ಕೆ ಒಪ್ಪಿಸಲಾಗಿದೆ.

ಕೊಡಗು ಜಿಲ್ಲೆಯ ಬಳಿಯ ಚೆಕ್ಲಿಹೊಳೆ ಜಲಾಶಯದ ಹಿನ್ನೀರಿನಲ್ಲಿ ಈಜುಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಅವರನ್ನು ನಂದೀಶ್ ಮತ್ತು ಪವನ್ ಎಂದು ಗುರುತಿಸಲಾಗಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೇಹಗಳನ್ನು ಹೊರ ತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT