ಪೇಜಾವರ ಶ್ರೀ ಹಾಗೂ ದೇವೇಗೌಡ 
ರಾಜ್ಯ

ದೇವೇಗೌಡರು ಇನ್ನಷ್ಟು ದಿನ ಪ್ರಧಾನಿಯಾಗಿದ್ದಿದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು: ಪೇಜಾವರ ಶ್ರೀ

10 ತಿಂಗಳು ಪ್ರಧಾನಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿ ಮುಂದುವರಿದ್ದದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು ...

ಉಡುಪಿ: 10 ತಿಂಗಳು ಪ್ರಧಾನಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿ ಮುಂದುವರಿದ್ದದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ಮಂಗಳವಾರ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.
ಇಂದು ಗೋವಿಂದ ಕಲ್ಯಾಣ ಮಂಟಪದಲ್ಲಿ ತಮ್ಮನ್ನು ಭೇಟಿಯಾದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಚೆನ್ನಮ್ಮ ದಂಪತಿಯನ್ನು ಅನುಗ್ರಹಿಸಿ ಮಾತನಾಡಿದರ ಶ್ರೀಗಳು, ನಿಷ್ಕಳಂಕ, ಪ್ರಾಮಾಣಿಕ ಭಗವದ್ಭಕ್ತ ರಾಜಕಾರಣಿಯಾದ ದೇವೇಗೌಡರು ಪ್ರಧಾನಿಯಾಗಿದ್ದಾಗ ಉತ್ತಮ ಕೆಲಸಗಳ ಜತೆಗೆ ಹಲವು ಸಮಸ್ಯೆ ಬಗೆಹರಿಸಿದ್ದು, ಅವರೊಬ್ಬ ಉತ್ತಮ ಮುತ್ಸದ್ಧಿ. ರೈತ ಪರ ಹೋರಾಟಗಾರ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿ ತಮ್ಮನ್ನು ಭೇಟಿಯಾಗಿ ಜೈಲಿಗೆ ತೆರಳಿದ್ದರು ಎಂದರು.
ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ ದಿಲ್ಲಿಯಲ್ಲಿ ಮಠದ ವಿವಿಧ ಯೋಜನೆ, ಅಭಿವೃದ್ಧಿ ಕಾರ್ಯಗಳಿಗಾಗಿ ಜಾಗ ನೀಡಿದ್ದಾರೆ ಎಂದು ಶ್ರೀಗಳು ತಿಳಿಸಿದರು.
ದೇವೇಗೌಡ ಅವರು ಕುಟುಂಬ ಸಮೇತ ಶ್ರೀಕೃಷ್ಣಮಠದಿಂದ ಗೋವಿಂದ ಕಲ್ಯಾಣ ಮಂಟಪಕ್ಕೆ ಬಂದಿಳಿದಾಗ ಅವರನ್ನು ಮಲ್ಲಿಗೆ ಹೂವಿನ ಹಾರ ಹಾಕಿ ಶಂನ ಸೂಕ್ತ ಪಠಣದೊಂದಿಗೆ ಸ್ವಾಗತಿಸಲಾಯಿತು. 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಶ್ರೀ ಕೃಷ್ಣಮಠದಲ್ಲಿ ಪೂಜೆ ಜತೆಗೆ 89ನೇ ಹುಟ್ಟು ಹಬ್ಬ ಸಂಭ್ರಮದಲ್ಲಿರುವ ಪೇಜಾವರ ಶ್ರೀಗಳಿಗೆ ಗೌರವ ಸಲ್ಲಿಸಲು ಬಂದಿದ್ದೇನೆ, ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದೇನೆ, ನೋ ಪೊಲಿಟಿಕ್ಸ್ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT