ಸಾಂದರ್ಭಿಕ ಚಿತ್ರ 
ರಾಜ್ಯ

ಕೆ.ಆರ್‌.ಮಾರುಕಟ್ಟೆಯಲ್ಲಿ ಜಾಗದ ವಿವಾದ: ನಿಂಬೆಹಣ್ಣು ವ್ಯಾಪಾರಿಯ ಬರ್ಬರ ಹತ್ಯೆ

ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ, ಸಿಟಿ ಮಾರುಕಟ್ಟೆ(ಕೃಷ್ಣ ರಾಜೇಂದ್ರ ಮಾರುಕಟ್ಟೆ) ಕಾಂಪ್ಲೆಕ್ಸ್ ಬಳಿ ವ್ಯಾಪಾರ ನಡೆಸುವ ಜಾಗಕ್ಕಾಗಿ ನಡೆದ ಜಗಳದಲ್ಲಿ ನಿಂಬೆಹಣ್ಣು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ, ಸಿಟಿ ಮಾರುಕಟ್ಟೆ(ಕೃಷ್ಣ ರಾಜೇಂದ್ರ ಮಾರುಕಟ್ಟೆ) ಕಾಂಪ್ಲೆಕ್ಸ್ ಬಳಿ ವ್ಯಾಪಾರ ನಡೆಸುವ ಜಾಗಕ್ಕಾಗಿ ನಡೆದ ಜಗಳದಲ್ಲಿ ನಿಂಬೆಹಣ್ಣು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಹಳೆಗುಡ್ಡದ ಹಳ್ಳಿಯ ನಿವಾಸಿ ಭರತ್ (32) ಕೊಲೆಯಾದ ವ್ಯಾಪಾರಿ. ತರಕಾರಿ ವ್ಯಾಪಾರಿ ಶರವಣ ಹಾಗೂ ಆತನ ನಾಲ್ಕೈದು ಮಂದಿ ಸಹಚರರು ಈ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭರತ್, ಸಿಟಿ ಮಾರುಕಟ್ಟೆಯ ಕಾಂಪ್ಲೆಕ್ಸ್ ಬಳಿ ನಿಂಬೆಹಣ್ಣು ವ್ಯಾಪಾರ ಮಾಡುತ್ತಿದ್ದರೆ, ಶರವಣ ನಿಂಬೆಹಣ್ಣಿನ ಜತೆಗೆ ತರಕಾರಿ ವ್ಯಾಪಾರ ಕೂಡ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಇವರಿಬ್ಬರ ನಡುವೆ ವ್ಯಾಪಾರ ನಡೆಸುವ ಜಾಗದ ವಿಚಾರಕ್ಕೆ ಜಗಳ ಉಂಟಾಗಿತ್ತು. ಜಗಳ ವಿಕೋಪಕ್ಕೆ ಹೋದಾಗ ಭರತ್ , ಶರವಣನ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು ಇಬ್ಬರನ್ನೂ ಜೈಲಿಗೆ ಕಳುಹಿಸಿದ್ದರು. ಕೆಲವೇ ದಿನಗಳಲ್ಲಿ ಅವರಿಬ್ಬರೂ ಜಾಮೀನಿನ ಮೇಲೆ ಹೊರಬಂದಿದ್ದರು.
ಭರತ್‍ ತನ್ನನ್ನು ಕೊಲೆ ಮಾಡಬಹುದು ಎಂದು ಭೀತಿಗೊಳಗಾಗಿದ್ದ ಶರವಣ, ಭರತ್‌ ನನ್ನೇ ಮುಗಿಸುವ ಯೋಜನೆ ರೂಪಿಸಿದ್ದ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕೆ.ಆರ್. ಮಾರುಕಟ್ಟೆ ಕಾಂಪ್ಲೆಕ್ಸ್‌ ಗೆ ನಾಲ್ಕೈದು ಮಂದಿ ಸಹಚರರ ಜತೆ ಶರವಣ ಬಂದಿದ್ದಾನೆ. ಅಲ್ಲಿದ್ದ ಭರತ್ ಮೇಲೆ ಏಕಾಏಕಿ ದಾಳಿ ನಡೆಸಿ ಮಚ್ಚು-ಲಾಂಗ್‍ ಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಸಿಟಿ ಮಾರುಕಟ್ಟೆ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮಾರುಕಟ್ಟೆಯ ಸಣ್ಣ ರೌಡಿಗಳ ಮೇಲೆ ನಿಗಾ ಇಟ್ಟು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT