ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಅನುಮಾನಾಸ್ಪದ ಸಾವು

ವಿಚಾರಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಶಿವಮೊಗ್ಗ: ವಿಚಾರಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಗುರುವಾರ ನಡೆದ ಘಟನೆಯಲ್ಲಿ ಮೃತನನ್ನು ಭದ್ರಾವತಿಯ ನಿವಾಸಿ ಇರ್ಫಾನ್ (30) ಎಂದು ಗುರುತಿಸಲಾಗಿದೆ.ಇರ್ಫಾನ್ ನನ್ನು ಕಳೆದ ವರ್ಷ ಪೋಕ್ಸೋ ಕಾಯ್ದೆಯಡಿ ಸಾಗರದಲ್ಲಿ ಬಂಧಿಸಲಾಗಿತ್ತು.
ಇರ್ಫಾನ್ ಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಗುರುವಾರ ಬೆಳಿಗ್ಗೆ ಆತನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೆಳಿಗ್ಗೆ ಸುಮಾರು 8 ಗಂಟೆಗೆ ನಿಧನನಾಗಿದ್ದಾನೆ ಎಂದು ಪೋಲೀಸರು ಹೇಳಿದ್ದಾರೆ. 
ಈ ನಡುವೆ ಇರ್ಫಾನ್ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು ಪೋಲೀಸರ ನಿರ್ಲಕ್ಷದ ಕುರಿತು ದೂರಿದ್ದಾರೆ.
ಸ್ಥಳಕ್ಕೆ ಪೋಲೀಸ್ ಅಧೀಕ್ಷಕಿ ಅಶ್ವಿನಿ ಎಂ. ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಪ್ರಾರಂಭವಾಗಿದ್ದು ಹೆಚ್ಚಿನ ವಿವರ ತಿಳಿಯಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT