ಗಂಗಮ್ಮ ದೇವಿ ವಿಷ ಪ್ರಸಾದ ಪ್ರಕರಣ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ 
ರಾಜ್ಯ

ಗಂಗಮ್ಮ ದೇವಿ ವಿಷ ಪ್ರಸಾದ ಪ್ರಕರಣ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

:ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿ ದೇವಾಲಯ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿದ್ದ

ಚಿಂತಾಮಣಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿ ದೇವಾಲಯ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ದಾಖಲಾಗಿದೆ.
ಚಿಂತಾಮಣಿ ನಗರದ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಸಂಬಂಧ ಗುರುವಾರ ಪೋಲೀಸರು ದೊಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಘಟನೆಗೆ ಸಂಬಂಧ ನಾಲವರನ್ನು ಬಂಧಿಸಲಾಗಿದ್ದು ಲಕ್ಷ್ಮೀ ಹಾಗೂ ಲೋಕೇಶ್ ನಡುವಿನ ಅಕ್ರಮ ಸಂಬಂಧವೇ ಇದಕ್ಕೆ ಮೂಲ ಕಾರಣವೆನ್ನುವುದು ತನಿಖೆಯಿಂದ ಬಹಿರಂಗಗೊಂಡಿತ್ತು. ಈ ಕುರಿತಂತೆ ಸಮಗ್ರ ತನಿಖೆ ನಡೆಸಿರುವ ಚಿಂತಾಮಣಿ ಡಿವೈಎಸ್​ಪಿ ಶ್ರೀನಿವಾಸ್‌ ನಾಲ್ವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. 
ಜನವರಿ 25ರಂದು ನಡೆದ ಘಟನೆಯಲ್ಲಿ ದೇವಾ;ಲಯದ ಪ್ರಸಾದ ಸೇವಿಸಿದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರೆ ಇನ್ನೂ ಎಂಟು ಮಂದಿ ಅಸ್ವಸ್ಥರಾಗಿದ್ದರು.ಘಟನೆ ಸಂಬಂಧ ಆರೋಪಿಗಳಾದ  ಲಕ್ಷ್ಮೀ, ಲೋಕೇಶ್ ಪಾರ್ವತಮ್ಮ, ಅಮರಾವತಿ  ಎಂಬುವವರನ್ನು ಬಂಧಿಸಲಾಗಿದೆ.ಇದರಲ್ಲಿ ಲಕ್ಷ್ಮಿ ಪ್ರಮುಖ ಆರೊಪಿಯಾಗಿದ್ದು ಈಕೆಗೆ ಉಳಿದ ಮೂವರು ಸಹಕರ ನೀಡಿದ್ದರೆನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT