ಗಂಗಮ್ಮ ದೇವಿ ವಿಷ ಪ್ರಸಾದ ಪ್ರಕರಣ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ 
ರಾಜ್ಯ

ಗಂಗಮ್ಮ ದೇವಿ ವಿಷ ಪ್ರಸಾದ ಪ್ರಕರಣ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

:ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿ ದೇವಾಲಯ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿದ್ದ

ಚಿಂತಾಮಣಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿ ದೇವಾಲಯ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ದಾಖಲಾಗಿದೆ.
ಚಿಂತಾಮಣಿ ನಗರದ ನರಸಿಂಹಪೇಟೆಯಲ್ಲಿರುವ ಗಂಗಮ್ಮ ದೇವಿದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಸಂಬಂಧ ಗುರುವಾರ ಪೋಲೀಸರು ದೊಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಘಟನೆಗೆ ಸಂಬಂಧ ನಾಲವರನ್ನು ಬಂಧಿಸಲಾಗಿದ್ದು ಲಕ್ಷ್ಮೀ ಹಾಗೂ ಲೋಕೇಶ್ ನಡುವಿನ ಅಕ್ರಮ ಸಂಬಂಧವೇ ಇದಕ್ಕೆ ಮೂಲ ಕಾರಣವೆನ್ನುವುದು ತನಿಖೆಯಿಂದ ಬಹಿರಂಗಗೊಂಡಿತ್ತು. ಈ ಕುರಿತಂತೆ ಸಮಗ್ರ ತನಿಖೆ ನಡೆಸಿರುವ ಚಿಂತಾಮಣಿ ಡಿವೈಎಸ್​ಪಿ ಶ್ರೀನಿವಾಸ್‌ ನಾಲ್ವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. 
ಜನವರಿ 25ರಂದು ನಡೆದ ಘಟನೆಯಲ್ಲಿ ದೇವಾ;ಲಯದ ಪ್ರಸಾದ ಸೇವಿಸಿದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರೆ ಇನ್ನೂ ಎಂಟು ಮಂದಿ ಅಸ್ವಸ್ಥರಾಗಿದ್ದರು.ಘಟನೆ ಸಂಬಂಧ ಆರೋಪಿಗಳಾದ  ಲಕ್ಷ್ಮೀ, ಲೋಕೇಶ್ ಪಾರ್ವತಮ್ಮ, ಅಮರಾವತಿ  ಎಂಬುವವರನ್ನು ಬಂಧಿಸಲಾಗಿದೆ.ಇದರಲ್ಲಿ ಲಕ್ಷ್ಮಿ ಪ್ರಮುಖ ಆರೊಪಿಯಾಗಿದ್ದು ಈಕೆಗೆ ಉಳಿದ ಮೂವರು ಸಹಕರ ನೀಡಿದ್ದರೆನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT