ರೇಷ್ಮಾ ಪಡೇಕನೂರ 
ರಾಜ್ಯ

ವಿಜಯಪುರ: ಕಾಂಗ್ರೆಸ್ ನಾಯಕಿ ನಿಗೂಢ ಸಾವು, ಸೇತುವೆ ಕೆಳಗೆ ಶವ ಪತ್ತೆ

ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ವಿಜಯಪುರ: ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.
ಗುರುವಾರ ರಾತ್ರಿ ರೇಷ್ಮಾ ಅವರನ್ನು ಹತ್ಯೆಗೈದು ದುಷ್ಕರ್ಮಿಗಳು ಶವವನ್ನು ಸೇತುವೆಯ ಕೆಳಗೆ ಎಸೆದಿರಬಹುದು ಎಂದು ಪೋಲೀಸರು ಶಂಕಿಸಿದ್ದಾರೆ.
ರೇಷ್ಮಾ ಗುರುವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಎಂಐಎಂ ಮುಖಂಡರೊಬ್ಬರೊಂದಿಗೆ ಕಾರಿನಲ್ಲಿ ತೆರಳಿದ್ದರೆನ್ನಲಾಗಿದೆ.ಈಕೆ ಎಂಐಎಂ ಮುಖಂಡರೊಡನೆ ಒಅಡನಾಟ ಹೊಂದಿದ್ದು ಈ ಹೆಂದೊಮ್ಮೆ ಮುಖಂಡನ ಪತ್ನಿ ರೇಷ್ಮಾ ಮನೆ ಮುಂದೆ ಬಂದು ರಂಪಾಟವನ್ನೂ ನಡೆಸಿದ್ದರು. ಎಂದು ಮೂಲಗಳು ಹೇಳಿವೆ.
ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ, 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರೇಷ್ಮಾ ಅವರಿಗೆ ಪಕ್ಷ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಆಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಘಟನೆ ಕುರಿತಂತೆ ಕೊಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT