ಸಂಗ್ರಹ ಚಿತ್ರ 
ರಾಜ್ಯ

ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಹಿ ಗುರುತು

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.

ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.
ಸಿಎಸ್​ ಶಿವಳ್ಳಿ ಸಾವಿನಿಂದ ತೆರವಾಗಿದ್ದ ಕುಂದಗೋಳ ಹಾಗೂ ಉಮೇಶ್​ ಜಾಧವ್​ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ನಾಳೆ ಮತದಾನ ನಡೆಯಲಿದೆ. ಇನ್ನು ಕಳೆದ ತಿಂಗಳು ನಡೆದಿದ್ದ ಲೋಕಸಭೆ ಚುನಾವಣೆಯ ವೇಳೆ ಮತದಾನ ಮಾಡಿದ್ದ ವ್ಯಕ್ತಿಗಳ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕಲು ಚುನಾವಣಾ ಆಯೋಗ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕಳೆದ ತಿಂಗಳು ನಡೆದಿದ್ದ ಲೋಕಸಭಾ ಚುನಾವಣೆ ವೇಳೆ ಇಲ್ಲಿನ ಮತದಾರರಿಗೆ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕಲಾಗುತ್ತದೆ. ಇನ್ನು ಈ ಎರಡೂ ಕ್ಷೇತ್ರಗಳಲ್ಲಿ ಒಟ್ಟಾರೆ 1,016 ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.
ಅಪಾರ ಪ್ರಮಾಣದ ನಗದು, ಚಿನ್ನ, ಮದ್ಯ ವಶ
ಇದೇ ವೇಳೆ ಈ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಒಟ್ಟು 48.82 ಲಕ್ಷ ನಗದು ಹಣ, 82,715 ರೂ ಮೊತ್ತದ ಮದ್ಯ, 30 ಲಕ್ಷ ಮೌಲ್ಯದ 1.11 ಕಿಲೋ ಅಮೂಲ್ಯ ಲೋಹಗಳು ಸೇರಿ ಒಟ್ಟಾರೆ 79.64 ಲಕ್ಷ ಮೊತ್ತದ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT