ಬತ್ತಿರುವ ಮಂತ್ರಾಲಯದಲ್ಲಿರುವ ತುಂಗಭದ್ರಾ ನದಿ 
ರಾಜ್ಯ

ಧರ್ಮಸ್ಥಳ ಅಷ್ಟೇ ಅಲ್ಲ, ಮಂತ್ರಾಲಯ, ಉಡುಪಿ ಸೇರಿದಂತೆ ಶ್ರೀಕ್ಷೇತ್ರಗಳಲ್ಲಿ ನೀರಿಗೆ ಹಾಹಾಕಾರ!

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಪರಿಣಾಮ ನೀರಿಗೆ ತತ್ವಾರ ಉಂಟಾಗಿ ಯಾತ್ರಾರ್ಥಿಗಳು ಯಾತ್ರೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕೆಂದು

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಪರಿಣಾಮ ನೀರಿಗೆ ತತ್ವಾರ ಉಂಟಾಗಿ ಯಾತ್ರಾರ್ಥಿಗಳು ಯಾತ್ರೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕೆಂದು ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ  ಮನವಿ ಮಾಡಿದ್ದರು. ಈ ಬೆನ್ನಲ್ಲೇ ಉಡುಪಿ, ಮಂತ್ರಾಲಯಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆಯೆಂದು ತಿಳಿದುಬಂದಿದೆ. 
ಮಂತ್ರಾಲಯದ ತುಂಗಭದ್ರಾ ನದಿ ಈಗಾಗಲೇ ಬತ್ತಿ ಹೋಗಿದ್ದು, ಭಕ್ತಾದಿಗಳು ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದೇ ವಸತಿ ಗೃಹಗದಲ್ಲೇ ಸ್ನಾನ ಮುಗಿಸಿ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಇನ್ನು ಉಡುಪಿಯ ಮಧ್ವ ಸರೋವರದಲ್ಲಿಯೂ ನೀರಿಗೆ ತತ್ವಾರ ಉಂಟಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ತಲಾ 12 ಸಾವಿರ ಲೀಟರ್ ನಂತೆ 5 ಟ್ಯಾಂಕರ್ ಗಳಿಂದ ನೀರು ತೆಗೆದುಕೊಳ್ಳಲಾಗುತ್ತಿದೆ. 
ಇನ್ನು ಭೀಮಾ ನದಿ ಬಳಿ ಇರುವ ಗಾಣಗಾಗುರದಲ್ಲಿ ನದಿ ಬತ್ತಿರುವ ಕಾರಣದಿಂದ ದತ್ತ ಕ್ಷೇತ್ರದಕ್ಕೆ ಬರುವ ಯಾತ್ರಿಕರು ಸ್ನಾನಕ್ಕೂ ಸಮಸ್ಯೆ ಎದುರಿಸುವಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT