ನಿಖಿಲ್ 
ರಾಜ್ಯ

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯವಾಗಿದ್ದ ಬಾಲಕ ಸಾವು

ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡು ಕಳೆದ ವಾರವಷ್ತೇ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಮತ್ತಿಕೆರೆ ನೇತಾಜಿ ನಗರದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಂಗಳೂರು: ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡು ಕಳೆದ ವಾರವಷ್ತೇ ಆಸ್ಪತ್ರೆಗೆ ದಾಖಲಾಗಿದ್ದ  ಬೆಂಗಳೂರಿನ ಮತ್ತಿಕೆರೆ ನೇತಾಜಿ ನಗರದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಕಟ್ಟಡ ನಿರ್ಮಾಣ ಗುತ್ತಿಗೆದಾರರಾದ ಅಮರೇಶ್‌ ಮತ್ತು ರಮಾಬಾಯಿ ದಂಪತಿಯ ಪುತ್ರ ನಿಖಿಲ್‌ (14) ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದ್ದಾನೆ.
ಯಲಹಂಕ ಡೆಲ್ಲಿ ಪಬ್ಲಿಕ್ ಸ್ಕೂಲ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ರಜೆ ಇದ್ದ ಕಾರಣ ಸ್ನೇಹಿತರ ಜೊತೆ ಕ್ರಿಕೆಟ್‌ ಆಡುತ್ತಿದ್ದ. ಆ ನಡುವೆ ಚೆಂಡು ಅಪಾರ್ಟ್ ಮೆಂಟ್ ಒಂದರ ಮಹಡಿ ಮೇಲೆ ಬಿದ್ದಿದೆ. ಚೆಂಡು ತರಲು ಬಾಲಕ ನಿಖಿಲ್ ಮಹಡಿ ಏರಿದ್ದಾನೆ. ಆ ಕಟ್ಟಡದ ಮೇಲೆ ಹಲವಾರು ವಿದ್ಯುತ್ ತಂತಿಗಳು ಹಾದು ಹೋಗಿದೆ. ಅದರಲ್ಲಿ ಮನೆಯ ಸಮೀಪದಲ್ಲೇ ಹಾದುಹೋಗಿದ್ದ ಹೈ ಟೆನ್ಷನ್​ ‌ವಿದ್ಯುತ್​ ತಂತಿಯನ್ನು ಸ್ಪರ್ಷಿಸಿದ್ದ ನಿಖಿಲ್ಗೆ ವಿದ್ಯುತ್ ಶಾಕ್ ಉಂಟಾಗಿದೆ.
ಬಾಲಕ ಅಲ್ಲೇ ಬಿದ್ದು ಒದ್ದಾಡುತ್ತಿದ್ದಾಗ ಅವನಸ್ನೇಹಿತರು ಹಾಗೂ ಸ್ಥಳೀಯರು ಮೇಲೆ ಹೋಗಿ ಪರಿಶೀಲಿಸಲು ಬಾಲಕನಿಗೆ ಸುಟ್ಟ ಗಾಯಗಳಾಗಿದ್ದವು.ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ನಂತರ ಹೆಚ್ಚುವರಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಪ್ಪಿತಸ್ಥರ ವಿರುದ್ಧ ಕ್ರಮ
ಬಾಲಕ ನಿಖಿಲ್ ಸಾವಿನ ಕುರಿತು ಮಾತನಾಡಿದ ಉತ್ತರ ವಿಭಾಗದ  ಡಿಸಿಪಿ ಶಶಿಕುಮಾರ್, ಬಾಲಕನ ಸಾವಿಗೆ ಬೆಸ್ಕಾಂ ನಿರ್ಲಕ್ಷ ಕಾರಣವೋ, ಆಕಸ್ಮಿಕವೋ ಎಂಬುದನ್ನು ತನಿಖೆಯಿಂದ ಬಯಲಿಗೆಳೆಯುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್