ಸಿಲಿಕಾನ್ ಸಿಟಿಯಲ್ಲಿ ಪೋಲೀಸ್ ಫೈರಿಂಗ್, ಇಬ್ಬರು ಸರಗಳ್ಳರ ಬಂಧನ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಪೋಲೀಸ್ ಫೈರಿಂಗ್, ಇಬ್ಬರು ಸರಗಳ್ಳರ ಬಂಧನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.

ಬೆಂಗಳುರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.
ಸೋಮವಾರ ಬೆಳಿಗ್ಗೆ ಬೆಂಗಳೂರು ಹೊರವಲಯದ ಸಾಸಿವೆಘಟ್ಟದ ಸಮೀಪ ನಡೆದ ಕಾರ್ಯಾಚರಣೆಯಲ್ಲಿ ಸುರೇಂದರ್ ಮತ್ತು ಕರಣ್ ಎಂಬಿಬ್ಬರು ಸರಗಳ್ಳರನ್ನು ಬಂಧಿಸಲಾಗಿದೆ.
ಉತ್ತರ ವಿಭಾಗದ ವ್ಯಾಪ್ತಿಯಲ್ಲಿ ಸರಗಳ್ಳತನದಲ್ಲಿ ಸಕ್ರಿಯರಾಗಿದ್ದಾರೆನ್ನುವ ಖಚಿತ ಮಾಹಿತಿ ಪಡೆದ ಪೋಲೀಸರು ಸಿನಿಮೀಯ ಮಾದರಿಯಲ್ಲಿ ಕಳ್ಳರನ್ನು ಚೇಸ್ ಮಾಡಿದ್ದಾರೆ. 
 ನಂದಿನಿ ಲೇಔಟ್, ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಕಳ್ಳರು ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ತಕ್ಷಣ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದ ಪೋಲೀಸರು ಮೊದಲಿಗೆ ಕಳ್ಳರಿಗೆ ಎಚ್ಚರುಇಕೆ ಕೊಟ್ಟಿದ್ದಾರೆ. ಆದರೆ ಕಳ್ಲರು ಪೋಲೀಸರ ಮಾತಿಗೆ ಗಮನ ನೀಡದೆ ಹೋದಾಗ ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಈ ವೇಳೆ ನಾಲ್ವರು ಪೋಲೀಸರಿಗೆ ಸಹ ಗಾಯಗಳಾಗಿದೆ.
ಆರೋಪಿಗಳು ಬೆಂಗಳೂರಿನ ಇಪ್ಪತ್ತಕ್ಕೂ ಹೆಚ್ಚು ಕಡೆ ಸರ ಕಳ್ಳತನ ನಡೆಸಿದ್ದರು. ಇವರ ಮೇಲೆ ದೆಹಲಿ ಸೇರಿ ದೇಶದ ನಾನಾ  ನಗರಗಳಲ್ಲಿ ದೂರುಗಳು ದಾಖಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT