ವೀರೇಂದ್ರ ಹೆಗ್ಗಡೆ 
ರಾಜ್ಯ

ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ: ವೀರೇಂದ್ರ ಹೆಗ್ಗಡೆ ಜೊತೆ ಮುಖ್ಯ ಕಾರ್ಯದರ್ಶಿ ಚರ್ಚೆ

ಧರ್ಮಸ್ಥಳಲ್ಲಿ ನೀರಿನ ತೀವ್ರ ಕೊರತೆ ಹಿನ್ನೆಲೆಯಲ್ಲಿ, ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ....

ಬೆಂಗಳೂರು: ಧರ್ಮಸ್ಥಳಲ್ಲಿ ನೀರಿನ ತೀವ್ರ ಕೊರತೆ ಹಿನ್ನೆಲೆಯಲ್ಲಿ, ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಗಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸೋಮವಾರ ಚರ್ಚೆ ನಡೆಸಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡುವ ಸುಮಾರು 30 ರಿಂದ 40 ಸಾವಿರ ಭಕ್ತರು ನೀರಿನ ತೀವ್ರ ಕೊರತೆ ಎದುರಿಸುತ್ತಿದ್ದು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹೆಗ್ಗಡೆ ಅವರು ಈ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನೀರಿನ ಕೊರತೆ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಮುಂದೂಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಭಕ್ತರಿಗೆ ಮನವಿ ಮಾಡಿದ್ದರಿಂದ ನೀರಿನ ಸಮಸ್ಯೆ ಬಗೆಹರಿಸಲು ಮಾತುಕತೆ ನಡೆಸಲಾಗಿದೆ.
ನೇತ್ರಾವತಿ ನದಿ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಈ ಭಾಗದಲ್ಲಿ ಮಳೆಯಾಗಲು ಇನ್ನೂ 10 ದಿನಗಳಾದರೂ ಬೇಕು ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದರು.
ನೀರಿನ ತೀವ್ರ ಕೊರತೆ ಹಿನ್ನೆಲೆಯಲ್ಲಿ, ಮಳೆಗಾಲದಲ್ಲಿ ತುಂಬಿ ಹರಿಯುವ ನೇತ್ರಾವತಿ ನದಿಗೆ ಅಡ್ಡಲಾಗಿ ಇನ್ನೊಂದು ಅಣೆಕಟ್ಟು ಕಟ್ಟಿ ಬೇಸಿಗೆ ಸಲುವಾಗಿ ನೀರು ಸಂಗ್ರಹಿಸುವ ಅವಶ್ಯಕತೆ ಇದೆ ಎಂದು ಹೆಗ್ಗಡೆ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ನಿರ್ದೇಶನದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಹೆಗ್ಗಡೆ ಅವರ ಜೊತೆ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ: ಆಪರೇಷನ್ ಸಿಂಧೂರ್ ಬಗ್ಗೆ ಶಶಿ ತರೂರ್ ಮಹತ್ವದ ಹೇಳಿಕೆ, ಕೋಲಾಹಲ!

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ಬಂಧನ, ಭರತ್ ರೆಡ್ಡಿ ಕೈವಾಡ?

ಮದುವೆಯಾದ ವರ್ಷಕ್ಕೆ ಖುಷಿ ಸುದ್ದಿ ಕೊಟ್ಟ ನಟ ಡಾಲಿ ಧನಂಜಯ್

T20 Worldcup: ನಿಮ್ಮನ್ನು ಟೂರ್ನಿಯಿಂದ ಹೊರಗಿಟ್ಟು ಸ್ಕಾಟ್ಲೆಂಡ್‌ಗೆ ಸ್ಥಾನ; BCBಗೆ ತಿಳಿಸಿದ ICC

ಬಂಗಾಳದಲ್ಲಿ ತರಾತುರಿಯಲ್ಲಿ SIR; ಪ್ರಜಾಪ್ರಭುತ್ವ ಭಾಗವಹಿಸುವಿಕೆಗೆ ಅಪಾಯ: ಅಮರ್ತ್ಯ ಸೇನ್ ಎಚ್ಚರಿಕೆ

SCROLL FOR NEXT