ತನ್ನ ಮೃತದೇಹದ ಫೋಟೋವನ್ನು ತಾನೇ ಕಳಿಸಿದ ವ್ಯಕ್ತಿ: ದಾವಣಗೆರೆಯಲ್ಲಿ ಕೆಲಕಾಲ ಆತಂಕ ! 
ರಾಜ್ಯ

ತನ್ನ ಮೃತದೇಹದ ಫೋಟೋವನ್ನು ತಾನೇ ಕಳಿಸಿದ ವ್ಯಕ್ತಿ: ದಾವಣಗೆರೆಯಲ್ಲಿ ಕೆಲಕಾಲ ಆತಂಕ!

ಯುವಕನೋರ್ವ ತನ್ನದೇ ಮೃತದೇಹದ ಫೋಟೊಗಳನ್ನು ತಾನೆ ಕಳಿಸಿ ಆತಕ ಪೋಷಕರು, ಸ್ನೇಹಿತರು ಕಂಗಾಲಾಗುವಂತೆ ಮಾಡಿದ್ದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

ದಾವಣಗೆರೆ: ಯುವಕನೋರ್ವ ತನ್ನದೇ ಮೃತದೇಹದ ಫೋಟೊಗಳನ್ನು ತಾನೆ ಕಳಿಸಿ ಆತಕ  ಪೋಷಕರು, ಸ್ನೇಹಿತರು ಕಂಗಾಲಾಗುವಂತೆ ಮಾಡಿದ್ದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. 
ಘಟನೆಯ ವಿವರ ತಿಳಿಯುತ್ತಿದ್ದಂತೆಯೇ ಆ ಯುವಕನ ಉದ್ದೇಶ ಬಹಿರಂಗವಾಗುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಾವಣಗೆರೆಯ ಯೆಲ್ಲಮ್ಮ ನಗರದ ನಿವಾಸಿ 23 ವರ್ಷದ ಪರಶುರಾಮ್  ಬಂಧಿತ ವ್ಯಕ್ತಿಯಾಗಿದ್ದು, ಪೋಷಕರು ಹಾಗೂ ಸ್ನೇಹಿತರಿಗೆ ಆತಂಕ ಉಂಟುಮಾಡುವುದಕ್ಕಾಗಿಯೇ ಈ ರೀತಿ ಮಾಡಿದ್ದಾನೆಂದು ತಿಳಿದುಬಂದಿದೆ. 
ದಾವಣಗೆರೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿ ಕೊಲೆಗಳು ನಡೆಯುತ್ತಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದದ್ದನ್ನು ಕಂಡ ಜನತೆ ಆತಂಕಕ್ಕೊಳಗಾಗಿದ್ದರು. ಪೊಲೀಸರು ವಿಚಾರಣೆಗೊಳಪಡಿಸಿದ ನಂತರ ಪರಶುರಾಮ್ ಎಂಬ ಯುವಕ ಸ್ಮಾರ್ಟ್ ಫೋನ್ ಗಾಗಿ ಹೀಗೆ ಮಾಡಿದ್ದಾನೆಂದು ತಿಳಿದುಬಂದಿದೆ. 
ಪರಶುರಾಮ್ ಹಾಗೂ ಸ್ನೇಹಿತರಿಗೆ ಆಕಸ್ಮಿಕವಾಗಿ ಸ್ಮಾರ್ಟ್ ಫೋನ್ ಸಿಕ್ಕಿದೆ, ಅದನ್ನು ಸ್ನೇಹಿತರಿಗೆ ಕೊಡುವುದಕ್ಕೆ ಇಷ್ಟ ಇಲ್ಲದೇ, ತಾನೆ ಇಟ್ಟುಕೊಳ್ಳಲು, ಸ್ನೇಹಿತರು ಹಾಗೂ ಕುಟುಂಬ ಸದಸ್ಯರನ್ನು ಭಯಪಡಿಸುವ ಉದ್ದೇಶದಿಂದ, ಟೊಮ್ಯಾಟೋ ಕೆಚ್ ಅಪ್, ಕುಂಕುಮದ ನೀರನ್ನು ತನ್ನ ಮೇಲೆ ಹಾಕಿಕೊಂಡು ಈ ರೀತಿ ತನ್ನದೇ ಮೃತದೇಹದ ಫೋಟೋವನ್ನು ವೈರಲ್ ಮಾಡಿದ್ದಾನೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!