ತಾಳಗುಪ್ಪ-ಬೆಂಗಳೂರು ರೈಲ್ವೆ ಇಂಜಿನ್ ನಲ್ಲಿ ಬೆಂಕಿ: ಪ್ರಯಾಣಿಕರು ಪಾರು 
ರಾಜ್ಯ

ತಾಳಗುಪ್ಪ-ಬೆಂಗಳೂರು ರೈಲ್ವೆ ಇಂಜಿನ್ ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

ಮೈಸೂರು ಲೋಕೋಮೋಟಿವ್, ತಾಳಗುಪ್ಪ-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ....

ಶಿವಮೊಗ್ಗ: ಮೈಸೂರು ಲೋಕೋಮೋಟಿವ್, ತಾಳಗುಪ್ಪ-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಕಾರಣ ರೈಲು ಸೋಮವಾರ ರಾತ್ರಿ ಭದ್ರಾವತಿ ನಿಲ್ದಾಣದಲ್ಲಿ ಸುಮಾರು ಎರಡು ಗಂಟೆಗಳಿಗೆ ಹೆಚ್ಚು ಕಾಲ ನಿಂತಿರುವ ಘಟನೆ ವರದಿಯಾಗಿದೆ ರೈಲು ಸಂಖ್ಯೆ - 16228 ನ ಇಂಜಿನ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿದ್ದಾಗಿ ಹೇಳಲಾಗಿದೆ.
ರಾತ್ರಿ 11ಕ್ಕೆ ಶಿವಮೊಗ್ಗದಿಂದ ಹೊರಟಿದ್ದ ರೈಲು ಭದ್ರಾವತಿಗೆ ತಲುಪುವಾಗ ಬೆಂಕಿ ಕಾಣಿಸಿದೆ.ತಕ್ಷಣ ಎಚ್ಚೆತ್ತ ರೈಲ್ವೆ ಇಲಾಖೆ ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದಾರೆ. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ.
ಬೆಂಕಿ ಹತ್ತಿದ್ದ ಇಂಜಿನ್ ಬದಲಿಸಿ ಬೇರೆ ಇಂಜಿನ್ ಅಳವಡಿಸಿದ ನಂತರ ರೈಲು ರಾತ್ರಿ 1.40ಕ್ಕೆ ಭದ್ರಾವತಿಯಿಂದ ಬೆಂಗಳೂರಿನತ್ತ ಹೊರಟಿದೆ. 
ಘಟನೆಯಲ್ಲಿ ಯಾವ ಪ್ರಯಾಣಿಕರಿಗೂ ಗಾಯಗಳಾಗಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ.
ಬೆಂಕಿ ಆಕಸ್ಮಿಕವಾದ ಕಾರಣ ಸುಮಾರು ಎರಡೂ ವರೆ ಗಂಟೆಗಳ ಕಾಲ ತಡವಾಗಿ ರೈಲು ಬೆಂಗಳುರು ತಲುಪಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT