ಮಂಡ್ಯ ಜಿಲ್ಲೆಯಲ್ಲಿ ಮತ ಎಣಿಕೆ ನಡೆಯಲಿರುವ ಸರ್ಕಾರಿ ಬಾಲಕರ ಕಾಲೇಜು 
ರಾಜ್ಯ

ಮಂಡ್ಯ, ಮೈಸೂರು ಜಿಲ್ಲೆಗಳ ರೈತರಿಗೆ ಸಾಲಮನ್ನಾ ಚಿಂತೆ

ಮಂಡ್ಯ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. ಅದಕ್ಕೆ ...

ಮೈಸೂರು: ಮಂಡ್ಯ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. ಅದಕ್ಕೆ ಕಾರಣ ಪೂರ್ವ ಮುಂಗಾರು ಕೊರತೆ. ಆದರೆ ಜಿಲ್ಲೆಯ ಗ್ರಾಮಸ್ಥರು ಲೋಕಸಭೆ ಚುನಾವಣೆಯ ಬೆಟ್ಟಿಂಗ್ ದಂಧೆಯಲ್ಲಿ ಮಗ್ನರಾಗಿದ್ದಾರೆ.
ಈ ಚರ್ಚೆ, ಮಾತುಕತೆ ತುಮಕೂರಿನವರೆಗೆ ಹೋಗಿ ಜೆಡಿಎಸ್ ವರಿಷ್ಠ ದೇವೇಗೌಡರ ಭವಿಷ್ಯದ ಬಗ್ಗೆಯೂ ನಡೆಯುತ್ತಿದೆ.
ಏಳು ಜನ ಜೆಡಿಎಸ್ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರನ್ನು ಹೊಂದಿರುವ ಮಂಡ್ಯ ಜನತೆಯ ತೀರ್ಪು ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ಕೂಡ ನಿರ್ಧರಿಸುತ್ತದೆ. ಇಲ್ಲಿನ ಹಲವು ರೈತರ ಸಾಲ ಇನ್ನೂ ಮನ್ನಾ ಆಗಿಲ್ಲ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜಿಲ್ಲೆಯ ಗ್ರಾಮಗಳ ಕೆಲವು ರೈತರ ಬಳಿ ಹೋಗಿ ಮಾತನಾಡಿಸಿದಾಗ ಅವರ ಮನದಾಳದಲ್ಲಿನ ಬಯಕೆಗಳು ತಿಳಿದುಬಂದವು. ರೈತರ ಸಾಲಮನ್ನಾ ಸಂಪೂರ್ಣವಾಗುವವರೆಗೆ ಮತ್ತು ಹೊಸ ಸಕ್ಕರೆ ಕಾರ್ಖಾನೆ ಯೋಜನೆ ಆರಂಭವಾಗುವವರೆಗೆ ಈ ಸರ್ಕಾರ ಉಳಿಯಬೇಕೆಂಬುದು ನಮ್ಮ ಆಸೆ ಎನ್ನುತ್ತಾರೆ ಯಲಿಯೂರಿನ ರೈತ ಮಾದೇ ಗೌಡ.
ಯಾವುದೇ ಸರ್ಕಾರ ಬಂದರೂ ರೈತರ ಸಾಲಮನ್ನಾ ಆಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ ಮತ್ತೊಬ್ಬ ರೈತ ಕುಂಟನಹಳ್ಳಿಯ ಶಿವಣ್ಣ. ಬಿಜೆಪಿ ಆಡಳಿತವಿರುವ ಸರ್ಕಾರಗಳಲ್ಲಿ ಸಹ ರೈತರ ಸಾಲಮನ್ನಾ ಆಗಿದೆ. ಬಿಜೆಪಿ ರಾಜ್ಯದಲ್ಲಿ ಬಂದರೆ ರೈತರ ಸಾಲಮನ್ನಾ ಆಗುತ್ತದೆ ಎಂಬ ವಿಶ್ವಾಸವಿದೆ ಎನ್ನುತ್ತಾರೆ ಅವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT