ಮಂಡ್ಯ ಜಿಲ್ಲೆಯಲ್ಲಿ ಮತ ಎಣಿಕೆ ನಡೆಯಲಿರುವ ಸರ್ಕಾರಿ ಬಾಲಕರ ಕಾಲೇಜು 
ರಾಜ್ಯ

ಮಂಡ್ಯ, ಮೈಸೂರು ಜಿಲ್ಲೆಗಳ ರೈತರಿಗೆ ಸಾಲಮನ್ನಾ ಚಿಂತೆ

ಮಂಡ್ಯ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. ಅದಕ್ಕೆ ...

ಮೈಸೂರು: ಮಂಡ್ಯ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. ಅದಕ್ಕೆ ಕಾರಣ ಪೂರ್ವ ಮುಂಗಾರು ಕೊರತೆ. ಆದರೆ ಜಿಲ್ಲೆಯ ಗ್ರಾಮಸ್ಥರು ಲೋಕಸಭೆ ಚುನಾವಣೆಯ ಬೆಟ್ಟಿಂಗ್ ದಂಧೆಯಲ್ಲಿ ಮಗ್ನರಾಗಿದ್ದಾರೆ.
ಈ ಚರ್ಚೆ, ಮಾತುಕತೆ ತುಮಕೂರಿನವರೆಗೆ ಹೋಗಿ ಜೆಡಿಎಸ್ ವರಿಷ್ಠ ದೇವೇಗೌಡರ ಭವಿಷ್ಯದ ಬಗ್ಗೆಯೂ ನಡೆಯುತ್ತಿದೆ.
ಏಳು ಜನ ಜೆಡಿಎಸ್ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರನ್ನು ಹೊಂದಿರುವ ಮಂಡ್ಯ ಜನತೆಯ ತೀರ್ಪು ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ಕೂಡ ನಿರ್ಧರಿಸುತ್ತದೆ. ಇಲ್ಲಿನ ಹಲವು ರೈತರ ಸಾಲ ಇನ್ನೂ ಮನ್ನಾ ಆಗಿಲ್ಲ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜಿಲ್ಲೆಯ ಗ್ರಾಮಗಳ ಕೆಲವು ರೈತರ ಬಳಿ ಹೋಗಿ ಮಾತನಾಡಿಸಿದಾಗ ಅವರ ಮನದಾಳದಲ್ಲಿನ ಬಯಕೆಗಳು ತಿಳಿದುಬಂದವು. ರೈತರ ಸಾಲಮನ್ನಾ ಸಂಪೂರ್ಣವಾಗುವವರೆಗೆ ಮತ್ತು ಹೊಸ ಸಕ್ಕರೆ ಕಾರ್ಖಾನೆ ಯೋಜನೆ ಆರಂಭವಾಗುವವರೆಗೆ ಈ ಸರ್ಕಾರ ಉಳಿಯಬೇಕೆಂಬುದು ನಮ್ಮ ಆಸೆ ಎನ್ನುತ್ತಾರೆ ಯಲಿಯೂರಿನ ರೈತ ಮಾದೇ ಗೌಡ.
ಯಾವುದೇ ಸರ್ಕಾರ ಬಂದರೂ ರೈತರ ಸಾಲಮನ್ನಾ ಆಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ ಮತ್ತೊಬ್ಬ ರೈತ ಕುಂಟನಹಳ್ಳಿಯ ಶಿವಣ್ಣ. ಬಿಜೆಪಿ ಆಡಳಿತವಿರುವ ಸರ್ಕಾರಗಳಲ್ಲಿ ಸಹ ರೈತರ ಸಾಲಮನ್ನಾ ಆಗಿದೆ. ಬಿಜೆಪಿ ರಾಜ್ಯದಲ್ಲಿ ಬಂದರೆ ರೈತರ ಸಾಲಮನ್ನಾ ಆಗುತ್ತದೆ ಎಂಬ ವಿಶ್ವಾಸವಿದೆ ಎನ್ನುತ್ತಾರೆ ಅವರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT