ನಿಖಿಲ್ ಕುಮಾರಸ್ವಾಮಿ, ಸುಮಲತಾ ಅಂಬರೀಷ್ 
ರಾಜ್ಯ

ಮಂಡ್ಯ: ಸುಮಲತಾ ಅಂಬರೀಷ್ ಜಯಭೇರಿ, ನಿಖಿಲ್ ಎಲ್ಲೀದ್ದಿಯಪ್ಪಾ? ಬಿಜೆಪಿ ವ್ಯಂಗ್ಯ

ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆ ಆರಂಭದಿಂದಲೂ ರಾಷ್ಟ್ರಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಸುಮಾರು 90 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೊತೆಗೆ ಆರಂಭದಿಂದಲೂ ತೀವ್ರ ಪೈಪೋಟಿ ನೀಡಿದ ಸುಮಲತಾ ಅಂಬರೀಷ್ ಕೊನೆಗೆ ಗೆಲುವಿನ ಜಯಮಾಲೆ ಹಾಕಿಕೊಂಡಿದ್ದಾರೆ. ಈ ಗೆಲುವಿನಿಂದಾಗಿ ಸುಮಲತಾ ಅಂಬರೀಷ್ ಬೆಂಬಲಿಗರು ಹಾಗೂ ಬಿಜೆಪಿ ಮುಖಂಡರು ಸಂತಸಗೊಂಡಿದ್ದು, ಜೆಡಿಎಸ್ ವಿರುದ್ಧ ವ್ಯಂಗ್ಯವಾಡುತ್ತಿದ್ದಾರೆ.

ಪ್ರಚಾರದ ವೇಳೆಯಲ್ಲಿ ನಿಖಿಲ್ ಎಲ್ಲೀದ್ದಿಯಪ್ಪಾ ? ಎಂಬುದು ತೀವ್ರ ಟ್ರೋಲ್ ಆಗಿತ್ತು. ಇದನ್ನ ಬಳಸಿಕೊಂಡು ಈಗ ಬಿಜೆಪಿ ಜೆಡಿಎಸ್ ನ್ನು ಟ್ರೋಲ್ ಮಾಡುತ್ತಿದೆ.

ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.
Mandya update

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT