ಸಾಂದರ್ಭಿಕ ಚಿತ್ರ 
ರಾಜ್ಯ

'ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು'- ಸುಮಲತಾ ಅಂಬರೀಷ್

ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.

ಮಂಡ್ಯ:  ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ  ಸುಮಲತಾ ಅಂಬರೀಶ್  ಒಂದು ಲಕ್ಷದ ಹದಿನೈದು ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುಮಲತಾ ಅವರ ಗೆಲುವಿನ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೆ ಬಾಕಿಯಿದೆ.
ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.
ತುಂಬಾ ದೊಡ್ಡ ಸಾಹಸ ಮಾಡಿದ್ದು, ಒಳ್ಳೇಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೆ. ಈ ಹಾದಿಯಲ್ಲಿ  ಚಿತ್ರೋದ್ಯಮದ ಗಣ್ಯರು, ರಾಜ್ಯದ ಜನತೆಯೇ ಬೆಂಬಲಿಸಿದ್ದು, ಅವರೆಲ್ಲರಿಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.
ಆರಂಭದಲ್ಲಿ ಹಿನ್ನೆಡೆಯಲ್ಲಿದ್ದರೂ ಮಧ್ಯಾಹ್ನದ ನಂತರ ಮುನ್ನಡೆ ಕಾಯ್ದುಕೊಂಡ ಸುಮಲತಾ ಅಂಬರೀಷ್ ಅವರಿಗೆ ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಸಿಕ್ಕಿದೆ.
ಮಂಡ್ಯ ಕ್ಷೇತ್ರದ ಪ್ರಗತಿ ಹಾಗೂ ಸಮಸ್ಯೆಗಳ ನಿವಾರಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸದ್ಯದಲ್ಲೇ ಜನರ ಮುಂದೆ ವಿವರಿಸಲಿದ್ದೇನೆ” ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT