ದಾವಣಗೆರೆ: ಪ್ರೀತಿ ಒಲ್ಲೆ ಎಂದ ಪ್ರೇಯಸಿಯ ತಂದೆಗೆ ಗುಂಡಿಕ್ಕಿದ ಯೋಧ! 
ರಾಜ್ಯ

ದಾವಣಗೆರೆ: ಪ್ರೀತಿ ಒಲ್ಲೆ ಎಂದ ಪ್ರೇಯಸಿಯ ತಂದೆಗೆ ಗುಂಡಿಕ್ಕಿದ ಯೋಧ!

ಪ್ರೀತಿಸುತ್ತಿದ್ದ ಯುವತಿ ಜತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರೇಯಸಿಯ ತಂದೆ ಮೇಲೆ ಯೋಧನೊಬ್ಬ ಗುಂಡು ಹಾರಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಪ್ರೀತಿಸುತ್ತಿದ್ದ ಯುವತಿ ಜತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರೇಯಸಿಯ ತಂದೆ ಮೇಲೆ ಯೋಧನೊಬ್ಬ ಗುಂಡು ಹಾರಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಯೋಧ ದೇವರಾಜ್ (27) ತಮ್ಮ ಪ್ರೇಯಸಿಯ ತಂದೆ ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡೇಟಿನಿಂದ ಗಾಯಗೊಂಡ ಪ್ರಕಾಶ್ ಅವರನ್ನು  ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ
ಪ್ರಕಾಶ್ ಅವರ ಮಗಳನ್ನು ಯೋಧ ದೇವರಾಜ್ ಪ್ರೀತಿಸುತ್ತಿದ್ದ. ಶುಕ್ರವಾರ ರಜೆ ಮೇಲೆ ಊರಿಗೆ ಬಂದಿದ್ದದೇವರಾಜ್ ತಮ್ಮಿಬ್ಬರ ಪ್ರೀತಿ ವಿಷಯವನ್ನು ಯುವತಿಯ ತಂದೆ ಪ್ರಕಾಶ್ ಬಳಿ ಹೇಳಿಕೊಂಡಿದ್ದಾನೆ. ಆದರೆ ಪ್ರಕಾಶ್ ತಾವು ಈ ಪ್ರಸ್ತಾವನೆಯನ್ನು ಒಪ್ಪಲಿಲ್ಲ. ಆಗ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಮಾತಿನ ಭರದಲ್ಲಿ ಯೋಧ ದೇವರಾಜ್ ತನ್ನ ಬಳಿ ಇದ್ದ ರೈಫಲ್ ನಿಂದ ಪ್ರಕಾಶ್ ಅವರ ಮೇಲೆ ಗುಂಡು ಹಾರಿಸಿದ್ದಾನೆ.ಗುಂಡೇಟು ತಿಂದ ಪ್ರಕಾಶ್ ಅವರನ್ನು ತಕ್ಷಣ ಶಿವಮೊಗ್ಗದ ಮೆಗಾನ್  ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಘಟನೆ ಸಂಬಂಧ ಮಾಹಿತಿ ಪಡೆದ ಪೋಲೀಸರು ಸ್ಥಳಕ್ಕಾಗಮಿಸಿ ಯೋಧನನ್ನು ಬಂಧಿಸಿದ್ದಾರೆ.ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT