ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ 
ರಾಜ್ಯ

ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಬೆಳಕು ಕಂಡ ಘಟನೆಯಲ್ಲಿ ಗೋಕಾಕ್​ ತಾಲೂಕಿನ ಅಡಿವೆಪ್ಪನ ಅಂಕಲಗಿ ಗ್ರಾಮದ ಶಿವಕುಮಾರ್​ ಬಲರಾಮ್​ ಉಪ್ಪಾರ (19)  ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಯುವಕನ ಶವ ದೊರಕಿದ್ದು ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.
ಹಿಂದೂಪರ ಸಂಘಟನೆಗಳ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಶಿವಕುಮಾರ್ ಅನೇಕ ಬಾರಿ ಗೋವುಗಳ ಕಳ್ಳಸಾಗಣೆಯನ್ನು ತಡೆದಿದ್ದ. ಹೀಗಾಗಿ ಗೋ ಸಾಗಣೆದಾರರೇ ಈತನನ್ನು ಕೊಂದು ಶಂಕೆ ವ್ಯಕ್ತವಾಗಬಾರದೆಂದು ಇಲ್ಲಿ ನೇಣಿಗೇರಿಸಿದ್ದಾರೆ ಎಂದು ಆತನ ಕುಟುಂಬಿಕರು, ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.
ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನ್ನ ಸ್ನೇಹಿತ ಪುಟಿನ್‌ರನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ: ಪ್ರಧಾನಿ ಮೋದಿ

ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ Fortuner ಕಾರಿನಲ್ಲಿ Putin ಪ್ರಯಾಣ! Video

ಪುಟಿನ್ ರ 'Flying Kremlin' ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಲಾದ ವಿಮಾನ'!

Video: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್; ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿ

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ

SCROLL FOR NEXT