ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ, ಪ್ರತಿಭಟನೆ

ಅಂಗನವಾಡಿ ಕೇಂದ್ರಗಳ ಬದಲಿಗೆ, ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ...

ಕಲಬುರಗಿ: ಅಂಗನವಾಡಿ ಕೇಂದ್ರಗಳ ಬದಲಿಗೆ, ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ  ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಶಿಕ್ಷಕರ ಸಂಘದ ಸದಸ್ಯರು ಹಾಗೂ ಸಿಪಿಐ (ಎಂ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷೆ ಶಾಂತಾ ಘಂಟಿ, ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಹಿತಾಸಕ್ತಿಗೆ ಧಕ್ಕೆಯಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಗಣಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಅಂಗನವಾಡಿಗಳಲ್ಲೇ ಎಲ್ ಕೆ ಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಇದರಿಂದ ಕಾರ್ಯಕರ್ತರ ಹಿತಾಸಕ್ತಿಯನ್ನು ಕಾಯ್ದುಕೊಂಡಂತಾಗುತ್ತದೆ ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಕಳೆದ 44 ವರ್ಷಗಳಿಂದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನೆರವಾಗುತ್ತಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ, ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT