ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳು, ಕನ್ನಡ ಅಧ್ಯಾಪಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು!

ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಾಪಕ ಬಸವರಾಜ್ ಎಂಬುವರು ವಿದ್ಯಾರ್ಥಿನಿಯರ ಫೋನ್ ನಂಬರ್ ತೆಗೆದುಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸರಗೊಂಡ ವಿದ್ಯಾರ್ಥಿನಿಯರು ತಮ್ಮ ಸಹ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. 
ವಿದ್ಯಾರ್ಥಿನಿಯರ ನೋವನ್ನು ಕೇಳಿದ ವಿದ್ಯಾರ್ಥಿಗಳು ಅಧ್ಯಾಪಕ ಹಿಡಿದು ಕಾಲೇಜು ಮುಂಭಾಗದಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಅಧ್ಯಾಪಕನನ್ನು ಕಾಲೇಜು ಮಂಡಳಿ ಅಮಾನತು ಮಾಡಿದೆ. 
ಆದರೆ ಅಧಿಕೃತವಾಗಿ ಯಾವುದೇ ವಿದ್ಯಾರ್ಥಿನಿಯರು ನಮಗೆ ದೂರು ನೀಡಲಿಲ್ಲ. ಹೀಗಾಗಿ ನಾವು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT