ಸಾಂದರ್ಭಿಕ ಚಿತ್ರ 
ರಾಜ್ಯ

ದೇವೇಗೌಡ ಕುಟುಂಬದ ಕುರಿತು 'ಸುಳ್ಳು ಸುದ್ದಿ': ಕನ್ನಡ ದಿನಪತ್ರಿಕೆ ಸಂಪಾದಕರ ವಿರುದ್ಧ ಎಫ್ಐಆರ್

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ ಮೇರೆಗೆ ಕನ್ನಡ ದಿನಪತ್ರಿಕೆ ಸಂಪಾದಕ ಹಾಗೂ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ ಮೇರೆಗೆ ಕನ್ನಡ ದಿನಪತ್ರಿಕೆ ಸಂಪಾದಕ ಹಾಗೂ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದೇವೇಗೌಡ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ವಿಶ್ವವಾಣಿ ಪತ್ರಿಕೆ ಶನಿವಾರ ಸುಳ್ಳು ವರದಿಯನ್ನು ಪ್ರಕಟಿತ್ತು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಪಿ. ಪ್ರದೀಪ್ ಕುಮಾರ್  ದೂರು ಸಲ್ಲಿಸಿದ್ದಾರೆ.

ವಿಶ್ವವಾಣಿಯ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಸಂಪಾದಕೀಯ ಸಿಬ್ಬಂದಿ ವಿರುದ್ಧ ಐಪಿಸಿ ಸೆಕ್ಷನ್  420 (ವಂಚನೆ ) 499 ( ಮಾನನಷ್ಟ ) ಹಾಗೂ 406 ( ನಂಬಿಕೆಯ ಅಪರಾಧ ಉಲ್ಲಂಘನೆ)   ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ  ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಹಿಳೆ ಎದುರು ಸೋಲಲು ನೀವೆ ಹೊಣೆ ಎಂದು ಆರೋಪಿಸಿ ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಜೊತೆಗೆ ಜಗಳ ಮಾಡಿದ್ದಾರೆ ಎಂದು ಸುಳ್ಳು ವರದಿ ಪ್ರಕಟಿಸಲಾಗಿತ್ತು ಎಂದು ಕುಮಾರ್ ಹೇಳಿದ್ದಾರೆ.

ಎಫ್ ಐಆರ್ ಕುರಿತಂತೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್,  ಮೂಲ ಆಧಾರದ ಮೇಲೆ ವರದಿ ಪ್ರಕಟಿಸಲಾಗಿದೆ.  ಈ ಬಗ್ಗೆ ಯಾರಾದರೂ ಯಾವುದೇ ಆಕ್ಷೇಪಣೆ ಹೊಂದಿದ್ದಲ್ಲಿ, ಅವರು ಸ್ಪಷ್ಟನೆಗೆ ಆದೇಶ ಹೊರಡಿಸಬಹುದಿತ್ತು. ಕಳೆದ 19 ವರ್ಷಗಳಿಂದಲೂ ಸಂಪಾದಕನಾಗಿ ಕೆಲಸ ಮಾಡುತ್ತಿದ್ದೇನೆ. ಇಂತಹ ಘಟನೆ ಯಾವಾಗಲೂ ನಡೆದಿರಲಿಲ್ಲ ಎಂದು ಹೇಳಿದ್ದಾರೆ.

ಹೆಚ್ಚಿನ ರೀತಿಯ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು. ಆದರೆ, ಉದ್ದೇಶಪೂರ್ವಕವಾಗಿ ಎಫ್ ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದಲ್ಲಿ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT