ಬಿ. ರಮಾನಾಥ ರೈ 
ರಾಜ್ಯ

ನೆಹರು, ಗಾಂಧಿಯನ್ನು ಕೀಳಾಗಿ ಕಂಡು ಗೋಡ್ಸೆಯನ್ನು ದೇಶಭಕ್ತನೆನ್ನುವುದು ನಾಚಿಕೆಗೇಡು: ರಮಾನಾಥ ರೈ'

ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರು ಅವರಂತಹಾ ಬ್ರಿಟೀಷರಿಂದ ಭಾರತವನ್ನು ಮುಕ್ತಗೊಳಿಸಲು ತಮ್ಮ ಜೀವನವನ್ನು ತ್ಯಾಗ ಮಾಡಿದವರಿಗೆ ಅಗೌರವ ತೋರುವುದು ನಾಚಿಕೆಗೇಡಿನ ವಿಚಾರ....

ಮಂಗಳೂರು: ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರು ಅವರಂತಹಾ ಬ್ರಿಟೀಷರಿಂದ ಭಾರತವನ್ನು ಮುಕ್ತಗೊಳಿಸಲು ತಮ್ಮ ಜೀವನವನ್ನು ತ್ಯಾಗ ಮಾಡಿದವರಿಗೆ ಅಗೌರವ ತೋರುವುದು ನಾಚಿಕೆಗೇಡಿನ ವಿಚಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ರಮಾನಾಥ ರೈ ಹೇಳಿದ್ದಾರೆ.
ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಕಾರ್ಯಕ್ರಮದ ನಂತರ ಮಾದ್ಯಮದವರೊಡನೆ ಮಾತನಾಡಿದ ರೈ "ಭಾರತವು ಸ್ವಾತಂತ್ರ್ಯವನ್ನು ಪಡೆದ ವೇಳೆ ಭಾರತ ಹಿಂದುಳಿದ ರಾಷ್ಟ್ರವಾಗಿತ್ತು. ಆಗ ನೆಹರು ಅವರು ಜಗತ್ತಿನ ಇತರೆ ಮುಂದುವರಿದ ದೇಶಗಳ ಸಾಲಿನಲ್ಲಿ ಭಾರತವನ್ನೂ ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿದ್ದರು. ಆರ್ಥಿಕತೆಯ ಬಲಪಡಿಸುವಿಕೆಗೆ ಕಾರಣವಾದ ಅವರ ದೂರದೃಷ್ಟಿ ಮೆಚ್ಚಬೇಕು. ಆದರೆ ಅಂದು ಬ್ರಿಟೀಷರೊಡನೆ ಕೈಜೋಡಿಸಿದ  ಆ ಮೂಲಕ ಸ್ವಾತಂತ್ರ ಹೋರಾಟಗಾರರನ್ನು ವಂಚಿಸಿ ಇಂದು ಅಂತಹಾ ಮೇರು ನಾಯಕರಿಗೆ ಅಗೌರವ ಸೂಚಿಸುತ್ತಿದ್ದಾರೆ.ನೆಹರು ಕುಟುಂಬದ ಮುಂದಿನ ಪೀಳಿಗೆಯವರೂ ಕೂಡ  ಈ ದೇಶಕ್ಕೆ ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ  ಆದರೆ ಈಗ ಅವರನ್ನು ಅವಮಾನಿಸಲಾಗುತ್ತಿದೆ.. ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಬಿಂಬಿಸಲಾಗುತ್ತಿದೆ ಹಾಗೆಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂ/೧ ಭ್ರಷ್ಟಾಚಾರಿ ಎಂದು ಹೇಳುತ್ತಿದ್ದಾರೆ.ಇದು ಶುದ್ದ ನಾಚಿಕೆಗೇಡಿನ ಸಂಗತಿ" ಎಂದರು.
"ಜವಾಹರಲಾಲ್ ನೆಹರು ಒಮ್ಮೆ ಹೇಳಿದ್ದರು- ಅಲ್ಪಸಂಖ್ಯಾತರು ಕೋಮುವಾದಿಗಳಾದರೆ ದೇಅಕ್ಕೆ ಮಾರಕವಾಗುತ್ತದೆ.ಒಂದೊಮ್ಮೆ ಕೋಮುವಾದಕ್ಕೆ ವಹುಮತ ಲಭಿಸಿದರೆ ದೇಶಕ್ಕೆ ಅದು ಸುರಕ್ಷಿತವಲ್ಲ. ಆದರೆ ಇಂದು ಕೋಮುವಾದ ಬಹುಮತ ಪಡೆದಿದೆ. ಆದರೆ ಇಂತಹಾ ಕೋಮುವಾದಿಗಳಿಂಡ ಜನತೆ ಅಂತರ ಕಾಯ್ದುಕೊಳ್ಳಬೇಕು" ರೈ ಹೇಳೀದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?