ಎಡಿಜಿಪಿ ಕಚೇರಿಯಲ್ಲಿ ಕೊಳಲು ನುಡಿಸುತ್ತಿರುವ ಪೊಲೀಸ್ ಹೆಡ್ ಕಾನ್ಸ್ ಟೇಬಲ್ 
ರಾಜ್ಯ

ಲಾಠಿಯನ್ನೇ ಕೊಳಲನ್ನಾಗಿ ಮಾರ್ಪಡಿಸಿದ ಪೊಲೀಸ್ ಹೆಡ್ ಕಾನ್ಸ್ ಟೇಬಲ್!

ಹುಬ್ಬಳ್ಳಿಯ ಪೊಲೀಸ್ ಹೆಡೆ ಕಾನ್ಸ್ ಟೇಬಲ್ ಚಂದ್ರಕಾಂತ್ ಹುಟ್ಗಿ ತನ್ನ ಲಾಠಿಯನ್ನೇ ಕೊಳಲನ್ನಾಗಿ ಮಾಡಿ ಸುಂದರವಾಗಿ ನುಡಿಸುತ್ತಾರೆ. ಅವರನ್ನು ಬೆಂಗಳೂರಿನ ತಮ್ಮ ಕಚೇರಿಗೆ ಕರೆಸಿಕೊಂಡ ಭಾಸ್ಕರ ರಾವ್ , ತಮ್ಮ ಸಿಬ್ಬಂದಿಯೊಂದಿಗೆ ಕೊಳಲಿನ ಗಾಯನ ಕೇಳಿ ಖುಷಿಪಟ್ಟಿದ್ದಾರೆ.

ಬೆಂಗಳೂರು: ಕಲೆ ಎನ್ನುವುದು ದೇವರು ಕೊಟ್ಟ ಉಡುಗೊರೆ.  ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ಕಲೆ ಇರುತ್ತದೆ . ಆದರೆ, ಎಷ್ಟೋ ಮಂದಿಗೆ ತಮ್ಮೊಳಗಿನ ಕಲೆ ಗೊತ್ತಿರಲಿಲ್ಲ, ಗೊತ್ತಿದ್ದರೂ ಪ್ರೋತ್ಸಾಹ ಸಿಕ್ಕಿರುವುದಿಲ್ಲ. ಇಂತಹದ್ದೇ ಕಲೆಯನ್ನು ಹೊಂದಿದ್ದ  ಪೊಲೀಸ್ ಸಿಬ್ಬಂದಿಯೊಬ್ಬರನ್ನು  ಪ್ರೋತ್ಸಾಹಿಸುವ  ಕೆಲಸವನ್ನು ಎಡಿಜಿಪಿ ಭಾಸ್ಕರರಾವ್  ಮಾಡಿದ್ದಾರೆ.

ಹುಬ್ಬಳ್ಳಿಯ ಪೊಲೀಸ್ ಹೆಡೆ ಕಾನ್ಸ್ ಟೇಬಲ್ ಚಂದ್ರಕಾಂತ್ ಹುಟ್ಗಿ ತನ್ನ ಲಾಠಿಯನ್ನೇ ಕೊಳಲನ್ನಾಗಿ ಮಾಡಿ ಸುಂದರವಾಗಿ ನುಡಿಸುತ್ತಾರೆ. ಅವರನ್ನು ಬೆಂಗಳೂರಿನ ತಮ್ಮ ಕಚೇರಿಗೆ  ಕರೆಸಿಕೊಂಡ ಭಾಸ್ಕರ ರಾವ್ ,  ತಮ್ಮ ಸಿಬ್ಬಂದಿಯೊಂದಿಗೆ ಕೊಳಲಿನ ಗಾಯನ ಕೇಳಿ ಖುಷಿಪಟ್ಟಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಹಿನ್ನೆಲೆಯಲ್ಲಿ ತಮ್ಮಗೆ ನೀಡಿರುವ ಲಾಠಿಯನ್ನೇ ಕೊಳಲಾಗಿ ಮಾರ್ಪಡಿಸಿಕೊಂಡ ಚಂದ್ರಕಾಂತ್ ಹುಟ್ಗಿ ಅವರ ಕಲೆ ಕಂಡು ಎಲ್ಲರೂ ಬೆರಗಾದರಲ್ಲದೆ, ಅವರನ್ನು ಪ್ರೋತ್ಸಾಹಿಸಿದರು.
ಚಂದ್ರಕಾಂತ್ ಹುಟ್ಗಿ ಅವರನ್ನು ಎಡಿಜಿಪಿ ಭಾಸ್ಕರ್ ರಾವ್ ಟ್ವೀಟರ್ ಮೂಲಕ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT