ಸಾಂದರ್ಭಿಕ ಚಿತ್ರ 
ರಾಜ್ಯ

ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲೆ ಆರಂಭ;ಅತಿ ಉಷ್ಣಾಂಶ ಹಿನ್ನೆಲೆ: ಕಲಬುರಗಿ, ಯಾದಗಿರಿಯಲ್ಲಿ ಜೂನ್ 14ಕ್ಕೆ ಮುಂದೂಡಿಕೆ

ರಾಜ್ಯಾದ್ಯಂತ ಬುಧವಾರ ಸರ್ಕಾರಿ ಶಾಲೆಗಳು ಆರಂಭಗೊಂಡಿವೆಯಾದರೂ...

ಬೆಂಗಳೂರು: ನಲವತ್ತೈದು ದಿನಗಳ ರಜೆಯ ಮಜಾ ಅನುಭವಿಸಿದ ರಾಜ್ಯದ 90 ಲಕ್ಷಕ್ಕೂ ಅಧಿಕ ಮಕ್ಕಳು ಇಂದು ಶಾಲೆಯತ್ತ ಮುಖ ಮಾಡಿದ್ದಾರೆ. ಶಾಲಾ ಮಕ್ಕಳನ್ನು ಹೂವು, ಸಿಹಿ ತಿಂಡಿ ನೀಡಿ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಸ್ವಾಗತಿಸಿವೆ.
ರಾಜ್ಯಾದ್ಯಂತ ಬುಧವಾರ ಸರ್ಕಾರಿ ಶಾಲೆಗಳು ಆರಂಭಗೊಂಡಿವೆಯಾದರೂ,  ರಾಜ್ಯದ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ ಪ್ರದೇಶಗಳಾದ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಶಾಲೆಗಳ ಆರಂಭದ ದಿನಾಂಕವನ್ನು ಜೂನ್ 14ಕ್ಕೆ ಮುಂದೂಡಲಾಗಿದೆ.
ಈ ಜಿಲ್ಲೆಗಳ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಹೆಚ್ಚಿರುವ ಹಿನ್ನೆಲೆಯಲ್ಲಿ ಮಕ್ಕಳ ಅರೋಗ್ಯದ ಹಿತದೃಷ್ಟಿಯಿಂದ ಶಾಲೆಗಳ ಪ್ರಾರಂಭೋತ್ಸವವನ್ನು ಎರಡು ವಾರಗಳ ಅವಧಿಗೆ ಮುಂದೂಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇದರಿಂದ ಉಂಟಾಗುವ ಶಾಲಾ ದಿನಗಳ ಲಭ್ಯತೆಯ ಕೊರತೆ ನೀಗಿಸಲು ಪ್ರತಿ ಶನಿವಾರದ ಪೂರ್ಣ ದಿನ ಹಾಗೂ ಮಧ್ಯಂತರ ರಜಾ ಅವಧಿಯನ್ನು  ಬಳಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
ಕಳೆದ ಮೇ 27ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ಎಲ್ಲಾ ಜಿಲ್ಲಾ ಉಪನಿರ್ದೇಶಕರ ಸಭೆಯಲ್ಲಿ ಕಲಬುರಗಿ ಹಾಗೂ ಯಾದಗಿರಿಯ ಜಿಲ್ಲಾ ಉಪನಿರ್ದೇಶಕರು, ಶಾಲಾ ಪ್ರಾರಂಭದ ದಿನಾಂಕವನ್ನು ಮುಂದೂಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT