ಸಂಗ್ರಹ ಚಿತ್ರ 
ರಾಜ್ಯ

ವಿಶ್ವೇಶ್ವರ ಭಟ್ಟರ ವಿರುದ್ಧ ಪ್ರಕರಣ ಹಿಂಪಡೆಯಲು ಎಸ್ ಎಂ ಕೃಷ್ಣ ಸಲಹೆ

ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.

ಬೆಂಗಳೂರು: ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನಿಖಿಲ್ ಕುಮಾರಸ್ವಾಮಿ ಕುರಿತಂತೆ ವಿಶ್ವವಾಣಿ ಪತ್ರಿಕೆ ಆಕ್ಷೇಪಾರ್ಹ ವರದಿ ಪ್ರಕಟಿಸಿದೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಪಿ. ಪ್ರದೀಪ್ ಕುಮಾರ್ ದೂರು ಸಲ್ಲಿಸಿದ್ದರು. ಈ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಇಂಬು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೂಡ ಜೆಡಿಎಸ್ ನಡೆಯನ್ನು ಟೀಕಿಸಿದ್ದು, ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಸೂಕ್ತ ಕ್ರಮವಲ್ಲ ಎಂದು ಹೇಳಿದೆ.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಕೂಡ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ  ಅವರು 'ಪೊಲೀಸರಿಗೆ ದೂರು ದಾಖಲಿಸುವ ಅಗತ್ಯವಿರಲಿಲ್ಲ. ಬದಲಾಗಿ ಸ್ಪಷ್ಟನೆ ನೀಡಬಹುದಿತ್ತು. ಇದು ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಅಸಹನೆಯನ್ನು ತೋರಿಸುತ್ತದೆ ಎಂದಿದ್ದಾರೆ. 
ಪತ್ರಿಕೆಯ ಸಂಪಾದಕರ ವಿರುದ್ಧ ಹೇರಲಾಗಿರುವ ಪ್ರಕರಣ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ಪತ್ರಿಕಾ ಸ್ವಾತಂತ್ರವನ್ನು ಕಗ್ಗೊಲೆ ಮಾಡಿದಂತೆ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದು, ಪ್ರಕರಣವನ್ನು ಕೂಡಲೆ ಹಿಂಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವ ಅವರು, ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ತಕ್ಷಣ ಹಿಂಪಡೆಯಬೇಕೆಂದು ಕೃಷ್ಣಾ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT