ಪ್ರಿಯಾಂಕಾ ಮೇರಿ ಫ್ರಾನ್ಸಿಸ್ 
ರಾಜ್ಯ

ಕೇವಲ ಎರಡೇ ತಿಂಗಳಲ್ಲಿ ಹಾಸನ ಜಿಲ್ಲಾಧಿಕಾರಿ ವರ್ಗಾವಣೆ!

ಲೋಕಸಭೆ ಚುನಾವಣೆ ಮುಗಿದು ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ತೆಗೆದುಹಾಕಿದ ಕೇವಲ ...

ಹಾಸನ: ಲೋಕಸಭೆ ಚುನಾವಣೆ ಮುಗಿದು ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ತೆಗೆದುಹಾಕಿದ ಕೇವಲ ಮೂರೇ ದಿನಗಳಲ್ಲಿ ರಾಜ್ಯ ಸರ್ಕಾರ ಗುರುವಾರ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಿದೆ.
ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಆಗ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಹಾನಸ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.
ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸಿ ಜನಪ್ರಿಯತೆ ಗಳಿಸಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು. ಅಕ್ರಂಪಾಷಾ ಅವರು ಫೆಬ್ರವರಿ 22 ರಂದು ಹಾಸನಕ್ಕೆ ವರ್ಗಗೊಂಡು ಆಗಮಿಸಿದ್ದರು. ಆದರೆ ಒಂದು ತಿಂಗಳ ಅವಧಿಯಲ್ಲೇ ಪಾಷಾರನ್ನು ಕೂಡ ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಕಳೆದ ಮಾರ್ಚ್ 30ರಂದು ಹಾಸನ ಡಿಸಿಯಾಗಿ ಪ್ರಿಯಾಂಕಾ ಮೇರಿ ಅಧಿಕಾರ ವಹಿಸಿಕೊಂಡಿದ್ದರು.
ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಹಾಸನ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಬಹಳ ವರ್ಗಾವಣೆ ನಡೆದಿದೆ. ಕಳೆದೊಂದು ವರ್ಷದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಪಿ ಸಿ ಜಾಫರ್, ಡಿ ರಣದೀಪ್, ಅಕ್ರಮ್ ಪಾಷಾ, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಡಿಸಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT