ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕಂಪು: ಧ್ವಜಾರೋಹಣ ನೆರವೇರಿಸಿದ ಸಿಎಂ ಯಡಿಯೂರಪ್ಪ

Manjula VN

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. 

ಸಾರ್ವಜನಿಕ ಇಲಾಖೆಯು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹಾಜರಾದ ಯಡಿಯೂರಪ್ಪ ಅವರು, ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಹಾಡಲಾಯಿತು. ತದನಂತರ ಕನ್ನಡ ನಾಡಧ್ವಜಾರೋಹಣ ಮಾಡಿದರು. 

ಬಳಿಕ ಸಿಎಂ ಶಾಂತಿಯ ಸಂಕೇತವಾಗಿರುವ ಪಾರಿವಾಳ ಹಾಗೂ ಬಲೂನುಗಳನ್ನು ಆಗಸದತ್ತ ಹಾರಿಬಿಟ್ಟರು. ನಂತರ 12 ಶಾಲೆಗಳ ಮಕ್ಕಳು ಪಥಸಂಚಲನ ನಡೆಸಿದರು. 

ಬೆಳಿಗ್ಗೆ 9 ಗಂಟೆಗೆ ಆರಂಭವಾಗಿರುವ ಈ ಕಾರ್ಯಕ್ರಮದಲ್ಲಿ 71 ಶಾಲೆಗಳ ಒಟ್ಟು 7,200 ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. 

SCROLL FOR NEXT