ಪ್ರತಿಭಟನೆಯಲ್ಲಿ ಡಿಕೆ ಸುರೇಶ್ 
ರಾಜ್ಯ

ಆರ್ ಸಿಇಪಿ ಹಾಲು ಉತ್ಪಾದಕರ ಪಾಲಿನ ಮರಣ ಶಾಸನ: ಸಂಸದ ಡಿ.ಕೆ ಸುರೇಶ್

ಎಫ್ ಟಿ ಎ ಅಡಿಯಲ್ಲಿ ಬೇರೆ ದೇಶದ ಹಾಲು ಉತ್ಪನ್ನಗಳನ್ನು ಇತರೆ ದೇಶಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಆರ್ ಸಿಇಪಿ ಕಾಯ್ದೆಗೆ ಸಹಿ ಹಾಕುವುದು, ನಮ್ಮ ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕರ...

ಬೆಂಗಳೂರು: ಎಫ್ ಟಿ ಎ ಅಡಿಯಲ್ಲಿ ಬೇರೆ ದೇಶದ ಹಾಲು ಉತ್ಪನ್ನಗಳನ್ನು ಇತರೆ ದೇಶಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಆರ್ ಸಿಇಪಿ ಕಾಯ್ದೆಗೆ ಸಹಿ ಹಾಕುವುದು, ನಮ್ಮ ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕರ ಪಾಲಿನ ಮರಣ ಶಾಸನಕ್ಕೆ ಸಹಿ ಹಾಕಿದಂತೆ ಎಂದು ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತರ ಜೀವನ ಮಟ್ಟವನ್ನು ಸುಧಾರಿಸುವ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇದೀಗ ರೈತರ ಆದಾಯದ ಮೂಲವಾದ ಹಾಲು ಉತ್ಪಾದನೆಗೆ ಪೆಟ್ಟು ನೀಡುವ ದುಷ್ಕೃತ್ಯಕ್ಕೆ ಕೈ ಇಟ್ಟಿದ್ದಾರೆ. ರೈತರೇ ಈ ದೇಶದ ಬೆನ್ನೆಲಬು ಎಂದು ಎಲ್ಲ ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಇದನ್ನು ನಂಬಿ ದೇಶದ ಶೇಕಡಾ 60 ರಷ್ಟು ಜನರು ಇಂದು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ ಎಂದರು.

ದೇಶದಲ್ಲಿ ಆರ್ಥಿಕ ಹಿಂಜರಿತ ಇದೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ದೊರಕತ್ತಿಲ್ಲ. ರೈತ ಸಮುದಾಯದ ಅಭಿವೃದ್ದಿಗೆ ಶ್ರಮಿಸಲಿದ್ದೇವೆ ಎನ್ನುವ ಭರವಸೆಯನ್ನು ನರೇಂದ್ರ ಮೋದಿ ಅವರು ನೀಡಿದ್ದರು. ಆದರೆ, ಈಗ ಈ ಕಾಯ್ದೆಗೆ ಸಹಿ ಹಾಕುವ ಮೂಲಕ ನೀವು ದೇಶದ ರೈತರ ಹೊಟ್ಟೆಯ ಮೇಲೆ ಹೊಡೆಯುವ ಕಾರ್ಯಕ್ಕೆ ಮುಂದಾಗುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ನವೆಂಬರ್‌ 4ರಂದು ಈ ಕಾಯ್ದೆಗೆ ಸಹಿ ಹಾಕುವ ಮೂಲಕ ವಿದೇಶದಲ್ಲಿ ನೀವು ಚಪ್ಪಾಳೆ ತಟ್ಟಿಸಿಕೊಳ್ಳಬಹುದು. ಆದರೆ ಮುಂದಿನ ದಿನಗಳಲ್ಲಿ ಈ ದೇಶದ ಜನರ ಸಿಟ್ಟಿಗೆ ಗುರಿಯಾಗುತ್ತೀರಿ ಎಂದು ಪ್ರಧಾನಿಗೆ ಎಚ್ಚರಿಕೆ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT