ಪ್ರತಿಭಟನೆಯಲ್ಲಿ ಡಿಕೆ ಸುರೇಶ್ 
ರಾಜ್ಯ

ಆರ್ ಸಿಇಪಿ ಹಾಲು ಉತ್ಪಾದಕರ ಪಾಲಿನ ಮರಣ ಶಾಸನ: ಸಂಸದ ಡಿ.ಕೆ ಸುರೇಶ್

ಎಫ್ ಟಿ ಎ ಅಡಿಯಲ್ಲಿ ಬೇರೆ ದೇಶದ ಹಾಲು ಉತ್ಪನ್ನಗಳನ್ನು ಇತರೆ ದೇಶಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಆರ್ ಸಿಇಪಿ ಕಾಯ್ದೆಗೆ ಸಹಿ ಹಾಕುವುದು, ನಮ್ಮ ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕರ...

ಬೆಂಗಳೂರು: ಎಫ್ ಟಿ ಎ ಅಡಿಯಲ್ಲಿ ಬೇರೆ ದೇಶದ ಹಾಲು ಉತ್ಪನ್ನಗಳನ್ನು ಇತರೆ ದೇಶಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಆರ್ ಸಿಇಪಿ ಕಾಯ್ದೆಗೆ ಸಹಿ ಹಾಕುವುದು, ನಮ್ಮ ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕರ ಪಾಲಿನ ಮರಣ ಶಾಸನಕ್ಕೆ ಸಹಿ ಹಾಕಿದಂತೆ ಎಂದು ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತರ ಜೀವನ ಮಟ್ಟವನ್ನು ಸುಧಾರಿಸುವ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇದೀಗ ರೈತರ ಆದಾಯದ ಮೂಲವಾದ ಹಾಲು ಉತ್ಪಾದನೆಗೆ ಪೆಟ್ಟು ನೀಡುವ ದುಷ್ಕೃತ್ಯಕ್ಕೆ ಕೈ ಇಟ್ಟಿದ್ದಾರೆ. ರೈತರೇ ಈ ದೇಶದ ಬೆನ್ನೆಲಬು ಎಂದು ಎಲ್ಲ ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಇದನ್ನು ನಂಬಿ ದೇಶದ ಶೇಕಡಾ 60 ರಷ್ಟು ಜನರು ಇಂದು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ ಎಂದರು.

ದೇಶದಲ್ಲಿ ಆರ್ಥಿಕ ಹಿಂಜರಿತ ಇದೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ದೊರಕತ್ತಿಲ್ಲ. ರೈತ ಸಮುದಾಯದ ಅಭಿವೃದ್ದಿಗೆ ಶ್ರಮಿಸಲಿದ್ದೇವೆ ಎನ್ನುವ ಭರವಸೆಯನ್ನು ನರೇಂದ್ರ ಮೋದಿ ಅವರು ನೀಡಿದ್ದರು. ಆದರೆ, ಈಗ ಈ ಕಾಯ್ದೆಗೆ ಸಹಿ ಹಾಕುವ ಮೂಲಕ ನೀವು ದೇಶದ ರೈತರ ಹೊಟ್ಟೆಯ ಮೇಲೆ ಹೊಡೆಯುವ ಕಾರ್ಯಕ್ಕೆ ಮುಂದಾಗುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ನವೆಂಬರ್‌ 4ರಂದು ಈ ಕಾಯ್ದೆಗೆ ಸಹಿ ಹಾಕುವ ಮೂಲಕ ವಿದೇಶದಲ್ಲಿ ನೀವು ಚಪ್ಪಾಳೆ ತಟ್ಟಿಸಿಕೊಳ್ಳಬಹುದು. ಆದರೆ ಮುಂದಿನ ದಿನಗಳಲ್ಲಿ ಈ ದೇಶದ ಜನರ ಸಿಟ್ಟಿಗೆ ಗುರಿಯಾಗುತ್ತೀರಿ ಎಂದು ಪ್ರಧಾನಿಗೆ ಎಚ್ಚರಿಕೆ ನೀಡಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT