ಎಂ. ವೆಂಕಯ್ಯನಾಯ್ಡು 
ರಾಜ್ಯ

ಮಾತೃ ಭಾಷೆ ಕಣ್ಣಿದ್ದಂತೆ, ಅನ್ಯ ಭಾಷೆ ಕನ್ನಡಕದಂತೆ- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮಾತೃಭಾಷೆ ಎಂಬುದು ಕಣ್ಣಿದ್ದಂತೆ, ಬೇರೆ ಭಾಷೆಗಳು ಕನ್ನಡಕವಿದ್ದಂತೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತೃ ಭಾಷೆಗೆ ಜೈಕಾರ ಮೊಳಗಿಸಿದ್ದಾರೆ.

ಮಂಗಳೂರು: ಮಾತೃಭಾಷೆ ಎಂಬುದು ಕಣ್ಣಿದ್ದಂತೆ, ಬೇರೆ ಭಾಷೆಗಳು ಕನ್ನಡಕವಿದ್ದಂತೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತೃ ಭಾಷೆಗೆ ಜೈಕಾರ ಮೊಳಗಿಸಿದ್ದಾರೆ.

ನಗರದ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ೧೭ನೆ ಘಟಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,  ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಾತೃ ಭಾಷೆಗೆ ಮನ್ನಣೆ ನೀಡುವಂತೆ ಕರೆ ನೀಡಿದರು. 

ಮಾತೃಭಾಷೆಯನ್ನು ನಾವು ಯಾವತ್ತೂ ಮರೆಯಲೇ ಬಾರದು. ತಾಯ್ನಾಡಿನ ಮಾತೃಭಾಷೆ ನಮ್ಮನ್ನು ರಕ್ಷಿಸುವ ಹೆಮ್ಮೆಯ ಭಾಷೆ. ಹೀಗಾಗಿ ಮಾತೃಭಾಷೆಯಲ್ಲಿ ಮಾತನಾಡಲು ಯಾವತ್ತಿಗೂ ಹೆಮ್ಮೆಪಡಬೇಕು ಎಂದರು.

ಮಕ್ಕಳು ತಮ್ಮ ಸ್ಥಳೀಯ ಮಾತೃ ಭಾಷೆಯಲ್ಲೇ ಮಾತನಾಡಲು ಕಲಿಯಬೇಕು. ಸರ್ಕಾರ ಕೂಡ ಪ್ರೌಢಶಾಲೆಯವರೆಗೂ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಬೇಕು. ಹಾಗೆಂದ ಮಾತ್ರಕ್ಕೆ ತಾವು ಬೇರೆ ಭಾಷೆಗಳ ವಿರೋಧಿಯಲ್ಲ, ಆದರೆ, ಮಾತೃ ಭಾಷೆಗೆ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT