ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು  ಕೊಂದ ಪತಿರಾಯ!

ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ. 

ಮಡಿಕೇರ: ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ.

ಜುಬೈದಾ(25) ಕೊಲೆಯಾದ ಮಹಿಳೆ. ಷರೀಫ್ ಎಂಬುವವರ ಜೊತೆ ಏಳು ವರ್ಷದ ಹಿಂದೆ ಜುಬೈದಾ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದು, ನಡತೆ ಸರಿಯಲ್ಲ ಎಂಬ ವಿಚಾರಕ್ಕೆ ಪತಿ ಕಳೆದ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ.

ಜಗಳ ತಾರಕಕ್ಕೇರಿದ ಪರಿಣಾಮ ಆತ ಪತ್ನಿಯನ್ನು 30 ಬಾರಿ ಚಾಕುವಿನಿಂದ ಇರಿದಿದ್ದು, ತೀವ್ರರಕ್ತ ಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಶನಿವಾರ ರಾತ್ರಿ 10.30ಕ್ಕೆ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪತಿಯನ್ನು ವಶಕ್ಕೆ ಪಡೆದಿರುವ ಪೋಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT