ಸೂರಾಪುರ ಗ್ರಾಮದಲ್ಲಿ ಟವರ್​​ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ! 
ರಾಜ್ಯ

ಸೂರಾಪುರ ಗ್ರಾಮದಲ್ಲಿ ಟವರ್​​ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಹತ್ತಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ಚಾಮರಾಜನಗರ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ರವಿಯು ಅದೇ ಗ್ರಾಮದ ಟೆಲಿಫೋನ್ ಎಕ್ಸ್​ಚೇಂಜ್​ನಲ್ಲಿ 17 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ. ಆದರೆ ಶುಕ್ರವಾರ ಆತನನ್ನು ಇದ್ದಕ್ಕಿಂದ್ದಂತೆ ನೌಕರಿಯಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಹಾಗೆಯೇ ತನ್ನ ಸಹೋದ್ಯೋಗಿ ಬಸವಣ್ಣ ಎಂಬಾತನಿಗೆ ರವಿಯು 50 ಸಾವಿರ ರೂಪಾಯಿ ಸಾಲ ನೀಡಿದ್ದನಂತೆ. ಆ ವ್ಯಕ್ತಿ ಸಾಲ ಹಿಂದಿರುಗಿಸದೇ ಸತಾಯಿಸಿದ್ದಾನೆ.

ಈ ಎರಡು ಘಟನೆಗಳಿಂದ ಮನನೊಂದು ರವಿ ಟವರ್ ಏರಿದ್ದಾನೆ. ಇನ್ನು ವಿಷಯ ತಿಳಿದ ಕೊಳ್ಳೇಗಾಲ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ, ಸಾಲ ಹಿಂತಿರುಗಿಸಿಕೊಡುವ ಭರವಸೆ ನೀಡಿದ್ದಾರೆ. ಅಲ್ಲದೆ ಪತ್ನಿಯಿಂದ ಫೋನ್ ಮೂಲಕ ಮಾತನಾಡಿಸಿ ಮನವೊಲಿಸಿದ್ದಾರೆ. ಬಳಿಕ ಇನ್ನು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಆತನನ್ನು ಕೆಳಗಿಳಿಸಲಾಗಿದೆ.

ವರದಿ: ಗೂಳಿಪುರ ನಂದೀಶ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT