ರಾಜ್ಯ

ತುಮಕೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್ಸು- ಲಾರಿ ಡಿಕ್ಕಿ, ಮೂವರು ದುರ್ಮರಣ

Nagaraja AB

ತುಮಕೂರು:  ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ ಊರುಕೆರೆಯಲ್ಲಿ ನಡೆದಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಲಾರಿ ಚಾಲಕ, ಕ್ಲೀನರ್ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸೋಪು ತುಂಬಿಕೊಂಡು ಲಾರಿ, ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದು, ಡಿಕ್ಕಿಯ ರಭಸಕ್ಕೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ರಸ್ತೆ ತುಂಬ ಸೋಪುಗಳು ಚೆಲ್ಲಿಪಿಲ್ಲಿಯಾಗಿ ಬಿದ್ದಿವೆ.

SCROLL FOR NEXT