ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಮೈತ್ರಿ ಸರ್ಕಾರ ಪತನ ವಿಚಾರ ಗಂಭೀರತೆ ನಡುವಲ್ಲೇ ಲಂಡನ್'ನತ್ತ ಎಚ್.ಡಿ.ಕುಮಾರಸ್ವಾಮಿ

ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ...

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ ಸಂದರ್ಭದಲ್ಲಿಯೇ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಖೆಡ್ಡಾಕ್ಕೆ ಕೆಡವಲು ಯಡಿಯೂರಪ್ಪ ಜೊತೆ ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಮುನ್ನಲೆಗೆ ಬರುತ್ತಿದ್ದು, ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ವಿದೇಶಕ್ಕೆ ಹಾರಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಪುತ್ರ ನಿಖಿಲ್ ಸಿನಿಮಾ ವಿಚಾರವಾಗಿ ನಾಲ್ಕು ದಿನಗಳ ಕಾಲ ಪತ್ನಿ ಅನಿತಾ ಜೊತೆಯಾಗಿ ಲಂಡನ್ ಗೆ ತೆರಳಿದ್ದು, ನ‌.8 ರಂದು ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT