ಸಿಂದೂಜಾ 
ರಾಜ್ಯ

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗದ ಕನಸು ಕಂಡಿದ್ದ ಯುವತಿ ರಸ್ತೆ ಗುಂಡಿಗೆ ಬಲಿ!

ವಿದೇಶದಲ್ಲಿ ಉದ್ಯೋಗಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗ ಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಘಟನೆಯಲ್ಲಿ ಸಿಂದೂಜಾ (23) ಎಂಬ ಯುವತಿ ರಸ್ತೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.

ಸಿಂಧೂಜಾ ವಿದೇಶದಲ್ಲಿ ಉದ್ಯೋಗ  ಪಡೆಯುವ ಉದ್ದೇಶದೊಡನೆ ಪಾಸ್​ಪೋರ್ಟ್​ ಗೆ ಅಪ್ಲೇ ಮಾಡಿದ್ದಳು. ಅದರ ವೆರಿಫಿಕೇಷನ್ ಗಾಗಿ ತನ್ನ ತಂದೆಯ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದಂಡರಮಕ್ಕಿ ಸಮೀಪದಲ್ಲಿನ ರಸ್ತೆಯಲ್ಲಿದ್ದ ದೊಡ್ಡ ಗಾತ್ರದ ಗುಂಡಿಯನ್ನು ಗಮನಿಸದೆ ಹೋಗಿದ್ದು ಬೈಕ್ ಗುಂಡಿಗೆ ಇಳಿದಿದಿದೆ. ಇದರಿಂದಾಗಿ ಸಿಂಧೂಜಾ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇಂಜಿನಿಯರಿಂಗ್ ಪದವಿ ಪಡೆದಿದ್ದ ಸಿಂಧೂಜಾಗೆ ವಿದೇಶದಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಅದಕ್ಕಾಗಿ ಆಕೆ ತಂದೆಯ ಬೈಕ್ ನಲ್ಲಿ ತೆರಳಿದ್ದರು. ಘಟನೆ ವೇಳೆ ತಂದೆ ಹೆಲ್ಮೆಟ್ ಹಾಕಿದ್ದ ಹಿನ್ನೆಲೆ ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾರೆ.

ರಸ್ತೆ ಸರಿಯಿಲ್ಲದ ಕಾರಣ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಸಿಂಧೂಜಾ ತಂದೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರಿತ್ತಿದ್ದಾರೆ. ಇನ್ನು ಯುವತಿಯ ಸಾವಿನ ಬಳಿಕ ಹಲವು ಸಂಘಟನೆಗಳು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದೆ.ಇತ್ತ ಸಾಮಾಜಿಕ ತಾಣಗಳಲ್ಲಿ ಸಹ ರಸ್ತೆ ಗುಂಡಿ ಮುಚ್ಚದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT