ನಳಿನ್ ಕುಮಾರ್ ಕಟೀಲ್, ಯಡಿಯೂರಪ್ಪ 
ರಾಜ್ಯ

ಬಿಎಸ್'ವೈ ಆಡಿಯೋ ಲೀಕ್ ಪ್ರಕರಣ: ಆಂತರಿಕ ತನಿಖೆ ನಡೆಸಲು ಮುಂದಾದ ಬಿಜೆಪಿ

ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆಂದು ಹೇಳಲಾಗುತ್ತಿರುವ ಆಡಿಯೋ ಬಹಿರಂಗಗೊಂಡ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಬಿಜೆಪಿ ಹೇಳಿದೆ. 

ಬೆಂಗಳೂರು: ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆಂದು ಹೇಳಲಾಗುತ್ತಿರುವ ಆಡಿಯೋ ಬಹಿರಂಗಗೊಂಡ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಬಿಜೆಪಿ ಹೇಳಿದೆ. 

ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತುಕೆತ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಸಭೆಯ ಹೇಳಿಕೆಯ ಆಡಿಯೋ ಬಹಿರಂಗ ಮಾಡಿರುವ ಸಂಬಂಧ ಎಲ್ಲವನ್ನೂ ಹೊರಗೆ ತರುತ್ತೇವೆ. ಆಂತರಿಕ ತನಿಖೆ ಕೂಡ ನಡೆಸಲಾಗುವುದು. ಯಡಿಯೂರಪ್ಪ ಅವರ ಆಡಿಯೋ ಮಾಡಿದ್ದು, ಬಿಜೆಪಿಯವರೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆಡಿಯೋ ಮಾಡಿದವರು ಬಿಜೆಪಿ ಕಾರ್ಯಾಕರ್ತರೇ ಎಂಬುದು ಎಲ್ಲಿ ಸ್ಪಷ್ಟವಾಗಿದೆ? ಪಕ್ಷದ ಕಡೆಯಿಂದ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆಂದು ಹೇಳಿದ್ದಾರೆ. 

ಆಡಿಯೋ ಬಗ್ಗೆ ನಾವು ಚಿಂತೆ ಮಾಡುತ್ತಿಲ್ಲ. ಆಡಿಯೋ ಲಾಭ ಪಡೆದುಕೊಳ್ಳಲು ಸಿದ್ದರಾಮಯ್ಯ ಅವರು ಮುಂದಾಗಿದ್ದು, ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅನರ್ಹ ಶಾಸಕರ ಕುರಿತು ನೀಡಿರುವ ಹೇಳಿಕೆಯ ಆಡಿಯೋ ವಿರುದ್ದ ಕಾಂಗ್ರೆಸ್ ಕಾನೂನು ಸಮರ ಮಾಡಬಹುದು. ಸಿದ್ದರಾಮಯ್ಯ ಕಾನೂನನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಸುಳ್ಳು ಪ್ರಚಾರ ಮಾಡಲು ಹೊರಟಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಬಿಜೆಪಿ ಸರ್ಕಾರ ಪತವಾದರೆ ಮುಖ್ಯಮಂತ್ರಿಯಾಗುವುದಾಗಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದು, ದ್ರಾಕ್ಷಿ ಸಿಗದ ನರಿಯಂತಾಗಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT