ಸಿಟಿ ರವಿ - ಹಂಪಿ ಶ್ರೀ 
ರಾಜ್ಯ

ಸಚಿವ ಸಿ.ಟಿ. ರವಿಯನ್ನು ತರಾಟೆಗೆ ತೆಗೆದುಕೊಂಡ ಹಂಪಿ ಸ್ವಾಮೀಜಿ

ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಅವರನ್ನು ಹಂಪಿಯ ವಿದ್ಯಾರಣ್ಯ ಭಾರತಿ ಶ್ರೀ ಅವರು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ. 

ಹೊಸಪೇಟೆ: ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಅವರನ್ನು ಹಂಪಿಯ ವಿದ್ಯಾರಣ್ಯ ಭಾರತಿ ಶ್ರೀ ಅವರು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ.

ಸಚಿವ ಸಿಟಿ ರವಿ ಅವರು ಇಂದು ಹಂಪಿಯ ಶ್ರೀ ವಿದ್ಯಾರಣ್ಯ ಭಾರತಿ ಶ್ರೀಗಳನ್ನು ಭೇಟಿ ಮಾಡಿದರು. ಈ ವೇಳೆ ವಿಶ್ವ ಪ್ರಸಿದ್ದ ಹಂಪಿಯಲ್ಲಿ ಮೂಲಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ಹಂಪಿಯ ಮೂಲಸೌಲಭ್ಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಹೇಳಿದ್ದಾಯಿತು. ಈಗ ನೀವು ಬಂದಿದ್ದೀರಿ. ನಿಮಗೂ ಹೇಳುತ್ತಿದ್ದೇನೆ
ನೀವೇನು ಮಾಡುತ್ತೀರೋ ನೋಡಿ. ಪ್ರದಾನಿ ಮೋದಿಗೆ ಹೇಳುವುದೊಂದೇ ಬಾಕಿ ಇದೆ. ಇಲ್ಲಿ ಕುಡಿಯುವ ನೀರು, ಶೌಚಾಲಯ ಇಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಕುಡಿಯುವ ನೀರು ಹಾಗೂ ಶೌಚಾಲಯ ಇಲ್ಲದೆ ಹಂಪಿಗೆ ಬರುವ ಸಾವಿರಾರು ಭಕ್ತರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಹಿಳೆಯರ ಪಾಡಂತೂ ಇನ್ನು ಕೆಟ್ಟದ್ದಾಗಿದೆ. ಇಲ್ಲಿ ಅಭಿವೃದ್ದಿ ಮಾಡಲು, ಕೊನೆ ಪಕ್ಷ ಶೌಚಾಲಯ ಕಟ್ಟಲು ಬಿಡುತ್ತಿಲ್ಲ. ಸ್ವಚ್ಚ ಭಾರತ್ ಅಂತೀರಿ, ಗಂಗಾ ಸ್ನಾನ್ ತುಂಗಾ ಪಾನ್ ಅಂತೀರಿ. ಆದರೆ ಇಲ್ಲಿ ಸ್ವಚ್ಚತೆ ಹೇಗಿದೆ. ನೀವೇ ನೋಡಿ ಎಂದು ವಿದ್ಯಾರಣ್ಯ ಶ್ರೀಗಳು ಸಚಿವರ ಮುಂದೆ ಅಸಮಾಧಾನ ತೋಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT